ಬೆಂಗಳೂರು: “ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಿದರೆ ಅದಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ. ಮಣ್ಣಿನ ಮಕ್ಕಳು ಸ್ವತಃ ಶ್ರಮಜೀವಿಗಳು ಉದ್ಯಮಶೀಲತೆಯ ಸ್ಫೂರ್ತಿ ಹೊಂದಿರುವವರು” ಎಂದು ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದರು.


COMMERCIAL BREAK
SCROLL TO CONTINUE READING

ಅವರು ಪ್ರಾದೇಶಿಕ ಸಮುದಾಯದ ಆರ್ಥಿಕ ಸಬಲೀಕರಣಕ್ಕಾಗಿ ರಚಿಸಲಾದ ವೇದಿಕೆ “ಫರ್ಸ್ಟ್ ಸರ್ಕಲ್” ನವೆಂಬರ್ 25, 26 ಮತ್ತು 27, 2022ರಂದು ಮೂರು ದಿನಗಳ ಕಾಲ ನಗರದ ಅರಮನೆ ಮೈದಾನದಲ್ಲಿ ಆಯಜಿಸಿರುವ ಬೃಹತ್ ಬಿಸಿನೆಸ್ ನೆಟ್ ವರ್ಕಿಂಗ್ ಎಕ್ಸ್ ಪೋ  ಹಾಗೂ ವಾರ್ಷಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದರು.


ಅವರು, “ಕರ್ನಾಟಕ, ಬೆಂಗಳೂರು ಇಡೀ ವಿಶ್ವಕ್ಕೆ ಆವಿಷ್ಕಾರದ ನಾಡು ಎನಿಸಿದೆ. ಎಲ್ಲಾ ಕ್ಷೇತ್ರದಲ್ಲೂ ಬೆಂಗಳೂರು ವಿಶ್ವಕ್ಕೆ ಮಾದರಿಯಾಗಿದೆ. ಇಂತಹ ಪುಣ್ಯಭೂಮಿ, ಭರವಸೆಯ ನಾಡಿನಲ್ಲಿ ನಾವು ಇದ್ದೇವೆ. ಇಂತಹ ಅವಕಾಶಗಳ ನಾಡಿನ ಶಕ್ತಿಯನ್ನು ಅರಿಯಬೇಕು.


ಇದನ್ನೂ ಓದಿ : BESCOM : ದುಸ್ಥಿಯಲ್ಲಿದ್ದ 1 ಲಕ್ಷಕ್ಕೂ ಅಧಿಕ ಟ್ರಾನ್ಸ್‌ ಫಾರ್ಮರ್‌ ರಿಪೇರಿ ಮಾಡಿದ ಬೆಸ್ಕಾಂ


ಉದ್ಯಮಿಗಳಾಗಿ ಯಶಸ್ಸು ಗಳಿಸಿದ ನಂತರ ಅದನ್ನು ಸಮಾಜಕ್ಕೆ ಹಿಂದಕ್ಕೆ ಕೊಡಬೇಕು. ಹೊಸ ಐಡಿಯಾಗಳನ್ನು ಹೊಂದಿರುವ ಉದ್ಯಮಿಗಳಿಗೆ ಸದಾ ನಾನು ಬೆಂಬಲಿಸುತ್ತೇನೆ. ನನ್ನ ಕರ್ತವ್ಯವೇ ಅವರಿಗೆ ಸನ್ನದ್ಧರನ್ನಾಗಿಸುವುದು, ಅವರಿಗೆ ಸೌಲಭ್ಯ ಒದಗಿಸುವುದು. ನಮ್ಮ ಜೊತೆಯಲ್ಲಿರುವ ನೂರಾರು ಮಂದಿ ಇಂದು ಉದ್ಯಮಿಗಳಾಗಿದ್ದಾರೆ. ಅವರ ಪ್ರಯತ್ನಕ್ಕೆ ನಮ್ಮ ಬೆಂಬಲವಷ್ಟೇ. ನಾವು ಉದ್ಯಮಿಗಳಾಗಲು ಬಯಸುವ ಎಲ್ಲರಿಗೂ ಬೆಂಬಲ, ಸಹಕಾರ ನೀಡುತ್ತೇವೆ” ಎಂದರು.


ಬಿಬಿಎಂಪಿ ವಿಶೇಷ ಆಯುಕ್ತ ಶ್ರೀ ಜೈರಾಮ್ ರಾಯ್ಪುರ, ಐ.ಆರ್.ಎಸ್. “ಬೆಂಗಳೂರಿನಲ್ಲಿ ಪ್ರಾರಂಭಗೊಂಡ ಈ ಫರ್ಸ್ಟ್ ಸರ್ಕಲ್ ಇನ್ನೂ 25 ಜಿಲ್ಲೆಗಳಿಗೆ ವಿಸ್ತರಿಸಲಿದೆ. ಕ್ರಮೇಣ ದೇಶದ ವಿವಿಧ ರಾಜ್ಯಗಳಿಗೆ ವಿಸ್ತರಿಸಲಿದೆ. ಇನ್ನೂ 250ಕ್ಕೂ ಹೆಚ್ಚು ಉದ್ಯಮಿಗಳು ಇದರ ವ್ಯಾಪ್ತಿಗೆ ಸೇರಿಕೊಳ್ಳಲಿದ್ದಾರೆ. ಇದು ಆಂತರಿಕ ಅರ್ಥ್ಯವ್ಯವಸ್ಥೆ ಸುಧಾರಣೆಗೆ ನೆರವಾಗಲಿದೆ” ಎಂದರು. 


ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ, ಸಂಸದರಾದ ಶ್ರೀ ಬಿ.ಎನ್.ಬಚ್ಚೇಗೌಡ, ಫ್ರೀಡಂ ಆಪ್ ಸಂಸ್ಥಾಪಕ ಶ್ರೀ ಸುಧೀರ್, ಕರ್ನಾಟಕ ಗ್ಯಾಸ್ಟ್ರೊ ಎಂಟರಾಲಜಿ ಇನ್ಸ್ ಟಿಟ್ಯೂಟ್ ಸಂಸ್ಥಾಪಕ ನಿರ್ದೇಶಕ ಡಾ.ನಾಗೇಶ್, ಫರ್ಸ್ಟ್ ಸರ್ಕಲ್ ಸದಸ್ಯರಾದ ಶ್ರೀ ಮನೋಹರ್ ಗೌಡ, ಶ್ರೀ ನಂದೀಶ್, ಶ್ರೀ ಇಂದ್ರೇಶ್, ಫಿಡೆಲಿಟಸ್ ಸಂಸ್ಥಾಪಕ, ಉದ್ಯಮಿ ಅಚ್ಚುತ್ ಗೌಡ ಮುಂತಾದವರು ಉಪಸ್ಥಿತರಿದ್ದರು.


ಫಸ್ಟ್ ಸರ್ಕಲ್ ಸಂಸ್ಥೆಯು ಪ್ರಾದೇಶಿಕ ಸಮುದಾಯದ ಏಳಿಗೆಗಾಗಿ ಕೊಡುಗೆ ನೀಡಲು ಸಿದ್ದರಿರುವ  ವೃತ್ತಿಪರರು, ಸ್ವಯಂ ಉದ್ಯೋಗಿಗಳು, ಹಾಗೂ ವ್ಯಾಪಾರಸ್ಥರನ್ನು ಒಳಗೊಂಡಿದೆ. ಜಾಗತಿಕ ನೆಟ್ ವರ್ಕಿಂಗ್ ಮೂಲಕ ಉದ್ದಿಮೆಗಳನ್ನು ಬೆಳೆಸಲು ಫಸ್ಟ್ ಸರ್ಕಲ್ ಸಹಾಯ ಮಾಡುತ್ತಿದೆ. ಬಹಳ ಅಲ್ಪ ಕಾಲದಲ್ಲಿ ಸಂಸ್ಥೆಯು ರಾಜ್ಯಾದ್ಯಂತ ವಿಸ್ತರಿಸುತ್ತಿದೆ. ಆದಾಗ್ಯೂ ಬೆಂಗಳೂರು ನಗರಕ್ಕೆ ಮೊದಲ ಆದ್ಯತೆ ನೀಡಲಾಗಿದೆ, ಕ್ರಮೇಣ ಕರ್ನಾಟಕದ ಎಲ್ಲಾ ನಗರಗಳಿಗೂ ವಿಸ್ತರಿಸಲಿದೆ.


ಇದನ್ನೂ ಓದಿ : ಟೀಚರ್ ನೇಮಕಾತಿ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಶಾಕ್...!


ಈ ಎಕ್ಸ್ ಪೋ ಕುರಿತು  ಫರ್ಸ್ಟ್ ಸರ್ಕಲ್ ಅಧ್ಯಕ್ಷ ಹಾಗೂ ಸ್ಥಾಪಕ ಸದಸ್ಯರಾದ ಶ್ರೀ ನಂದೀಶ್ ಎಸ್.ಆರ್. “ಫರ್ಸ್ಟ್ ಸರ್ಕಲ್ ಆಯೋಜಿಸಿರುವ ಈ ಮೂರು ದಿನಗಳ ಎಕ್ಸ್ ಪೋ ಕರ್ನಾಟಕದ ಉದ್ಯಮಿಗಳಿಗೆ ಜಾಲ ನಿರ್ಮಿಸಿಕೊಳ್ಳಲು, ಹೂಡಿಕೆದಾರರನ್ನು ಆಕರ್ಷಿಸಲು ಹಾಗೂ ತಮ್ಮ ಉದ್ಯಮ ಬಾಂಧವರೊಂದಿಗೆ ಸಂಪರ್ಕ ಹೊಂದಲು ಅವಕಾಶ ನೀಡುತ್ತದೆ. ದೇಶ ವಿದೇಶಗಳ ಹೂಡಿಕೆದಾರರು, ಉದ್ಯಮಿಗಳು ಭಾಗವಹಿಸುವ ಈ ಎಕ್ಸ್ ಪೋ ಹಾಗೂ ಸಮ್ಮೇಳನದ ಸದವಕಾಶವನ್ನು ಉದಯೋನ್ಮುಖ ಉದ್ಯಮಿಗಳು ಪಡೆಯಬೇಕು ಎನ್ನುವುದು ನಮ್ಮ ಉದ್ದೇಶ.ತಮ್ಮ ಉದ್ಯಮ ವಿಸ್ತರಣೆ ಮಾಡಿಕೊಳ್ಳುವವರಿಗೆ ಅವಕಾಶ ನೀಡುತ್ತದೆ” ಎಂದ.


ಪ್ರಸ್ತುತ ಫಸ್ಟ್ ಸರ್ಕಲ್ ಸಂಸ್ಥೆಯು 6 ವಲಯಗಳಲ್ಲಿ 150 ಸದಸ್ಯರು ಹಾಗೂ 500+ ಸದಸ್ಯರನ್ನು ಒಳಗೊಂಡಿದ್ದು ಕೇವಲ 6 ತಿಂಗಳ ಅಲ್ಪಾವಧಿಯಲ್ಲಿ 57 ಕೋಟಿ ರೂ ಗಳ ವ್ಯವಹಾರ ನಡೆಸಲಾಗಿದೆ.


ಫಸ್ಟ್ ಸರ್ಕಲ್ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಸಾವಿರಾರು ಸಂಬಾವ್ಯ ಗ್ರಾಹಕರೊಂದಿಗಿರುವ ಹಲವು ವಲಯಗಳ ಹೂಡಿಕೆದಾರರು, ಉದ್ಯಮಿಗಳು, ವಾಣಿಜ್ಯೋದ್ಯಮಿಗಳು, ಯಶಸ್ವಿ ವೃತ್ತಿಪರರು, ಅಧಿಕಾರಿಗಳು ಮಾತ್ರವಲ್ಲದೆ ದೇಶಾದ್ಯಂತ ಇರುವ ನವನವೀನ ಸ್ಟಾರ್ಟ್ ಅಪ್ ಗಳು, ವ್ಯಾಪಾರೀ ಸಂಸ್ಥೆಗಳು ಮತ್ತು ಉದ್ಯಮಿಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ.


ಪ್ರಸ್ತುತ ನಡೆಯುತ್ತಿರುವ ಭಾರತದ ಅತ್ಯಂತ ದೊಡ್ಡ ಬೃಹತ್ ಬಿಸಿನೆಸ್ ಎಕ್ಸ್ ಪೋ  ದಲ್ಲಿ ಪ್ರಪಂಚದ ವಿವಿಧ ಭಾಗಗಳ ಪ್ರತಿನಿಧಿಗಳು ಭಾಗವಹಿಸಿದ್ದಾರೆ.


ಅರಮನೆ ಮೈದಾನದ 6ನೇ ದ್ವಾರದ ಗ್ರ್ಯಾಂಡ್ ಕ್ಯಾಸಲ್ ನಲ್ಲಿಈ ಕಾರ್ಯಕ್ರಮ ನಡೆಯುತ್ತಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.