ಭಗತ್‌ಸಿಂಗ್‌ ನೇಣಿಗೇರುವ ಪಾತ್ರ ಮಾಡುತ್ತ ಪ್ರಾಣ ಬಿಟ್ಟ 12ರ ಬಾಲಕ..!

ಕನ್ನಡ ರಾಜ್ಯೋತ್ಸವದ ಅಂಗವಾಗಿ ದೇಶಪ್ರೇಮಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ತರಬೇತಿ ನಡೆಸುತ್ತಿದ್ದ ಬಾಲಕನೊಬ್ಬ ದುರಾದೃಷ್ಟವಶಾತ್ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

Written by - Krishna N K | Last Updated : Oct 30, 2022, 05:13 PM IST
  • ಭಗತ್‌ಸಿಂಗ್‌ ನೇಣಿಗೇರುವ ಪಾತ್ರ ಮಾಡುತ್ತ ಪ್ರಾಣ ಬಿಟ್ಟ 12ರ ಬಾಲಕ
  • ಕನ್ನಡ ರಾಜ್ಯೋತ್ಸವದ ಅಂಗವಾಗಿ ದೇಶಪ್ರೇಮಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ತರಬೇತಿ
  • ಚಿತ್ರದುರ್ಗ ನಗರದ ಕೆಳಗೋಟೆ ಬಡಾವಣೆಯಲ್ಲಿರುವ ಯುವಕನ ಮನೆಯಲ್ಲಿಯೇ ಈ ಘಟನೆ ನಡೆದಿದೆ
ಭಗತ್‌ಸಿಂಗ್‌ ನೇಣಿಗೇರುವ ಪಾತ್ರ ಮಾಡುತ್ತ ಪ್ರಾಣ ಬಿಟ್ಟ 12ರ ಬಾಲಕ..! title=

ಚಿತ್ರದುರ್ಗ : ಕನ್ನಡ ರಾಜ್ಯೋತ್ಸವದ ಅಂಗವಾಗಿ ದೇಶಪ್ರೇಮಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ತರಬೇತಿ ನಡೆಸುತ್ತಿದ್ದ ಬಾಲಕನೊಬ್ಬ ದುರಾದೃಷ್ಟವಶಾತ್ ನೇಣಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.

ಸಂಜಯ್‌ ಗೌಡ (12) ಮೃತ ದುರ್ದೈವಿ. ನಗರದ ಕೆಳಗೋಟೆ ಬಡಾವಣೆಯಲ್ಲಿರುವ ಯುವಕನ ಮನೆಯಲ್ಲಿಯೇ ಈ ಘಟನೆ ನಡೆದಿದೆ. ಸಂಜಯ್‌ ಎಸ್​​ಎಲ್​​ವಿ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿದ್ದ. ನವೆಂಬರ್ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಅಂಗವಾಗಿ ಭಗತ್ ಸಿಂಗ್ ಪಾತ್ರ ಪ್ರದರ್ಶನ ನೀಡಲು ಸಿದ್ಧತೆ ನಡೆಸಿದ್ದ. ಶಾಲೆಯಿಂದ ಮನೆಗೆ ಬಂದು ಬಳಿಕವೂ ರಿಹರ್ಸಲ್‌ಗೆ ಮುಂದಾಗಿದ್ದ.

ಇದನ್ನೂ ಓದಿ: ನಿಂಗಿದು ಬೇಕಿತ್ತಾ ಮಗನೇ : ಬೆಂಕಿ ಉಗುಳಲು ಹೋಗಿ ಗಡ್ಡ ಸುಟ್ಟಕೊಂಡ ಯುವಕ..!

ಭಗತ್‌ಸಿಂಗ್‌ ನೇಣಿಗೆರುವ ಪಾತ್ರ ಮಾಡಲು ಸಿದ್ದನಾಗಿದ್ದ ಸಂಜಯ್‌ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಹಾಗಿ ಕುತ್ತಿಗೆಗೆ ಬಿಗಿದುಕೊಂಡು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್‌ ಟೋಪಿ ಹಾಕಿಕೊಂಡು ಜಿಗಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪೋಷಕರು ಮನೆಗೆ ಬಂದು ನೋಡಿದ ಕೂಡಲೇ ಸಂಜಯ್‌ನನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಈ ಕುರಿತು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News