"ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ"-ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Written by - Manjunath N | Last Updated : Sep 14, 2024, 05:07 PM IST
  • ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ
  • ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು
  • ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ
"ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ"-ಸಿಎಂ ಸಿದ್ದರಾಮಯ್ಯ ವಾಗ್ದಾಳಿ title=

ಬೆಂಗಳೂರು: ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರ ಹಿಂದೂ ನಾವೆಲ್ಲ ಒಂದು ಎಂಬ ಘೋಷವಾಕ್ಯ ಬರೀ ಚುನಾವಣಾ ಕಾಲಕ್ಕಷ್ಟೇ ಸೀಮಿತ.ಚುನಾವಣೆ ಮುಗಿದರೆ ಈ ನಾಡಿನ ದಲಿತರು, ಶೋಷಿತರನ್ನು ಅವರು ಹಿಂದೂವಾಗಿ, ತಮ್ಮಲ್ಲಿ ಒಬ್ಬನಾಗಿ ಕಾಣರು. ಈ ಸಮುದಾಯಗಳ ಬಗ್ಗೆ ಬಿಜೆಪಿ ನಾಯಕರ ಮನಸ್ಸಿನಲ್ಲಿ ತುಂಬಿರುವ ದ್ವೇಷ, ಅಸೂಯೆ, ಅಸಹನೆಗೆ ಮುನಿರತ್ನ ಬಾಯಿಂದ ಉದುರಿದ ಅಣಿಮುತ್ತುಗಳು ಸಾಕ್ಷಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನಾಳೆ ರಾಜ್ಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ..! ಸೋಮವಾರವೂ ರಜೆ, ಸರ್ಕಾರದ ಈ ನಿರ್ಧಾರಕ್ಕೆ ಕಾರಣವೇನು..?

ವೈರಲ್‌ ಆಗಿರುವ ಆಡಿಯೋದಲ್ಲಿ ಮುನಿರತ್ನ ಅವರು ದಲಿತ ಮತ್ತು ಒಕ್ಕಲಿಗ ಸಮುದಾಯವನ್ನು ಅತ್ಯಂತ ಅಶ್ಲೀಲವಾಗಿ, ಮನಸೋ ಇಚ್ಛೆ ನಿಂದಿಸಿದ್ದಾರೆ,ಆತನಿಂದ ಹಣಕ್ಕಾಗಿ ಬೇಡಿಕೆಯಿಟ್ಟಿದ್ದಾರೆ, ಕೊನೆಗೆ ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇವೆಲ್ಲವೂ ಅತ್ಯಂತ ಗಂಭೀರ ಸ್ವರೂಪದ ಅಪರಾಧಗಳಾಗಿವೆ ಎಂದು ಟೀಕಿಸಿದರು.

40% ಕಮಿಷನ್‌ ಸರ್ಕಾರ ತೊಲಗಿದರೂ ಅದರಿಂದ ಹುಟ್ಟಿರುವ ರಕ್ತಬೀಜಾಸುರರು ಉಳಿದಿದ್ದಾರೆ.ಈಗ ನಾವು ಕೈಗೆತ್ತಿಕೊಂಡಿರುವ ಸ್ವಚ್ಚತಾ ಅಭಿಯಾನದಲ್ಲಿ ಈ ಹೊಲಸನ್ನು ಎಲ್ಲಿ ಇಡಬೇಕು ಅಲ್ಲಿಗೆ ಖಂಡಿತಾ ತಲುಪಿಸುತ್ತೇವೆ.ಮಾದ್ಯಮಗಳ ಮುಂದೆ ನಿಂತು ರಾಜ್ಯದ ಕಾನೂನು ಸುವ್ಯವಸ್ಥೆಯ ಬಗ್ಗೆ ಉಪದೇಶ ಕೊಡುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೆಂದ್ರ ಮತ್ತು ವಿಪಕ್ಷ ನಾಯಕ ಆರ್ ಆಶೋಕ್ ಅವರಿಗೆ ತಮ್ಮದೇ ಗೂಂಡಾ ಪ್ರವೃತ್ತಿಯ ಶಾಸಕ ಮುನಿರತ್ನ ಎದುರು ನಿಂತು ಮಾತನಾಡುವ ಧೈರ್ಯ ಇದೆಯಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಳಿಗಿರಿರಂಗನ ಬೆಟ್ಟ ಸೇರಿದಂತೆ 3 ಕಡೆ ಹೊಸ ಪ್ರಬೇಧದ ಜೀರುಂಡೆ ಪತ್ತೆ

ಈಗ ಬಿಜೆಪಿ ನಾಯಕರಿಗೆ ಉಳಿದಿರುವುದು ಎರಡೇ ದಾರಿ.ಒಂದು ಮುನಿರತ್ನ ಅವರ ಹೇಳಿಕೆಗೆ ಬೆಂಬಲ ಕೊಟ್ಟು ತಾವು ದಲಿತ ವಿರೋಧಿಗಳು ಎಂದು ಒಪ್ಪಿಕೊಳ್ಳುವುದು, ಇಲ್ಲವೇ ನಾಡಿನ ದಲಿತ ಸಮುದಾಯದವರ ಬಳಿ ಬಹಿರಂಗ ಕ್ಷಮೆ ಕೇಳಿ, ಮುನಿರತ್ನ ಅವರನ್ನು ಪಕ್ಷದಿಂದ ಹೊರದಬ್ಬುವುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News