ನವದೆಹಲಿ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ಹಿನ್ನಲೆಯಲ್ಲಿ ದೆಹಲಿಗೆ ತೆರಳಿದ್ದರು. ಅವರ ನಿವಾಸದಲ್ಲಿ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಇದೀಗ ಅಮಿತ್ ಶಾ - ಸಿಎಂ ಯಡಿಯೂರಪ್ಪ ಭೇಟಿ ಮುಕ್ತಾಯಗೊಂಡಿದ್ದು, ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಸಿಹಿ ಸುದ್ದಿ ತರಲಿದ್ದಾರೆ ಎನ್ನಲಾಗುತ್ತಿದೆ.


COMMERCIAL BREAK
SCROLL TO CONTINUE READING

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ(B.S.Yediyurappa) ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಅವರೊಂದಿಗೆ ಅಮಿತ್ ಶಾ ನಿವಾಸದಲ್ಲಿ ಇದ್ದರೆಂಬುದಾಗಿ ತಿಳಿದು ಬಂದಿದೆ. ಈ ಮೂಲಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.


JDS: '2023ಕ್ಕೆ ಕರ್ನಾಟಕ ಅಂದ್ರೇ 'ಜನತಾದಳ' ಅನ್ನೋ ಹಾಗೆ ಮಾಡ್ತೀವಿ'


ಒಂದು ವೇಳೆ ಸಂಪುಟ ಪುನರಚನೆಯಾದ್ರೆ 5+5 ಸೂತ್ರ ಅಳವಡಿಸಿಕೊಳ್ಳುವಂತೆಯೂ, ಒಂದು ವೇಳೆ ಸಂಪುಟ ವಿಸ್ತರಣೆಯಾದ್ರೆ 3+2 ಸೂತ್ರವನ್ನು ಅಳವಡಿಸಿಕೊಳ್ಳುವಂತೆಯೂ ಬಿಜೆಪಿ ಹೈಕಮಾಂಡ್ ಸಿಎಂ ಯಡಿಯೂರಪ್ಪ ಅವರಿಗೆ ಸೂಚಿಸಿದ್ದಾನೆ ಎನ್ನಲಾಗಿದೆ. ಇದೀಗ ಸಿಎಂ ಯಡಿಯೂರಪ್ಪ ಹಾಗೂ ಅಮಿತ್ ಶಾ ಭೇಟಿ ಮುಕ್ತಾಯಗೊಂಡಿದ್ದು, ಅವರ ನಿವಾಸದಿಂದ ಹೊರಟಿರುವಂತ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ ತರುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.


CM BSY : ಸಂಪುಟ ವಿಸ್ತರಣೆಗೆ ಸಿಗಲಿದೆಯಾ ಅನುಮತಿ ? ಕುತೂಹಲ ಕೆರಳಿಸಿದ ಸಿಎಂ ದೆಹಲಿ ಭೇಟಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ