ಚಾಮರಾಜನಗರ : ಚಾಮರಾಜನಗರ ಮತ್ತು ಗುಂಡ್ಲುಪೇಟೆಯ 754 ಕೋಟಿ ರೂ.ಗಳ ಯೋಜನೆಯ ಎರಡು ಪ್ರಸ್ತಾವನೆಗಳನ್ನು ಮಂಡಳಿ ಸಭೆಗೆ ಅನುಮೋದನೆಗಾಗಿ ಕಳುಹಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ತಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು.


COMMERCIAL BREAK
SCROLL TO CONTINUE READING

ಸಮಗ್ರ ಜಿಲ್ಲೆಯ ಕೆರೆಗಳನ್ನು ತುಂಬಿಸಲು 1100 ಕೋಟಿ ರೂ.ಗಳ ಡಿಪಿಆರ್ ಸಿದ್ಧವಾಗಿದ್ದು, ಇದಕ್ಕೆ ಅನುಮೋದನೆಯಾದರೆ ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯಾಗಲಿದ್ದು, ಈ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.  ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಇಡೀ ಜಿಲ್ಲೆಯ ಕೆರೆ ತುಂಬಿಸುವ ಯೋಜನೆಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ನೀರಾವರಿಯ ಐದು ಯೋಜನೆಗಳಿಗೆ ಮಂಜೂರಾತಿ ನೀಡಿ 694 ಕೋಟಿ ರೂ.ಗಳ ವೆಚ್ಚದಲ್ಲಿ 63 ಕೆರೆಗಳನ್ನು 2 ಯೋಜನೆಗಳಲ್ಲಿ ಪೂರ್ಣಗೊಳಿಸಿದ್ದು, ಗುಂಡ್ಲುಪೇಟೆ, ಮಟೇಹಳ್ಳ, ಕುಡ್ತರಿಹಳ್ಳ ಸೇರಿದಂತೆ ಇನ್ನೂ 3 ಯೋಜನೆಗಳನ್ನು 121 ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಪೂರ್ಣಗೊಳಿಸಿದೆ ಎಂದರು.


ಇದನ್ನೂ ಓದಿ : ಹಿಂದಿನ ಸರ್ಕಾರಗಳಿಗಿಂತ ಹೆಚ್ಚಿನ ಹಣ ಬೊಕ್ಕಸದಲ್ಲಿದೆ: ಸಚಿವ ಆರ್.ಅಶೋಕ್


ನೀರಾವರಿ ಯೋಜನೆಗಳಿಂದ ಅಂತರ್ಜಲ ಹೆಚ್ಚಳವಾಗಿ, ಕೃಷಿ, ಕುಡಿಯುವ ನೀರು ಇವುಗಳಿಗೆ ಸಹಕಾರಿಯಾಗಲಿದೆ.  ಇದರಿಂದ ಇಲ್ಲಿ ಜನವಸತಿ ಆರೋಗ್ಯವಂತರಾಗುತ್ತಾರೆ. ಚಾಮರಾಜನಗರ ಜಿಲ್ಲೆಯನ್ನು ಕೈಗಾರಿಕಾ ಜಿಲ್ಲೆಯಾಗಿ ಪರಿವರ್ತಿಸಲು ಸಾಧ್ಯವಿದೆ.  ಈಗಾಗಲೇ ಕೈಗಾರಿಕೆಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ.   ಜಿಲ್ಲೆಯಲ್ಲಿ ಕೈಗಾರಿಕಾ ಟೌನ್‍ಶಿಪ್ ಸ್ಥಾಪಿಸಿ, ಸಾವಿರ ಎಕರೆ ಪ್ರದೇಶದಲ್ಲಿ ಬೃಹತ್ ಮತ್ತು ಸಣ್ಣ ಕೈಗಾರಿಕೆಗಳನ್ನು ಮಂಜೂರಾತಿ ಮಾಡಲಾಗುವುದು. ಯುವಕರ ಕೈಗೆ ಕೆಲಸ ಸಿಗಬೇಕು ಎಂಬ ಕಾರಣದಿಂದ ಚಾಮರಾಜನಗರಕ್ಕೆ ಈ  ಯೋಜನೆಗಳಿಗೆ ಮಂಜೂರಾತಿ ನೀಡಲಾಗುವುದು ಎಂದರು.  


ಚಾಮರಾಜನಗರ ಜಿಲ್ಲೆಗೆ ಹೋಗುವುಮೂಲಕ ನಮ್ಮ ರಾಜಕೀಯ ಶಕ್ತಿ ವೃದ್ಧಿಯಾಗುತ್ತದೆಯೇ ವಿನ: ಕಡಿಮೆಯಾಗುವುದಿಲ್ಲ. ಬಹಳ ವರ್ಷಗಳಿಂದ  ಅನಾವಶ್ಯಕವಾಗಿ ಒಂದು ಮೂಢನಂಬಿಕೆ ಉಳಿದುಕೊಂಡಿದೆ.  ಇಲ್ಲಿರುವವರು ಮುತ್ತಿನಂಥ ಜನ, ಇಲ್ಲಿಯ ಜನರ ದರ್ಶನ ಮಾಡಿದರೆ ಅದು ಶುಭಸೂಚನೆ ಎಂದರು ಚಾಮರಾಜನಗರ ಗಡಿ ಜಿಲ್ಲೆ. ಇದರ ಸಮಗ್ರ  ಹಾಗೂ ಯೋಜನಾಬದ್ಧ ಅಭಿವೃದ್ಧಿಯಾಗಬೇಕು. ಇಲ್ಲಿ ನೈಸರ್ಗಿಕ ಸಂಪತ್ತಿದೆ. ಅತ್ಯುತ್ತಮವಾದ ವನ್ಯಜೀವಿ ಸಂಪತ್ತು, ಕೆರೆಕಟ್ಟೆಗಳ ಸಂಪತ್ತು, ಕಷ್ಟಪಟ್ಟು ದುಡಿಯುವ ರೈತಾಪಿ ವರ್ಗದವರಿದ್ದಾರೆ ಎಂದರು.


ಇಲ್ಲಿ ಅಭಿವೃದ್ಧಿಯಾಗುವ ಸಕಾಲ ಕೂಡಿಬಂದಿದೆ. ಜಿಲ್ಲೆಯಾಗಿ 25 ವರ್ಷಗಳಾದ ಮೇಲೆ ಮೂಲಸೌಕರ್ಯಗಳು ಇಲ್ಲಿ ಕಾಣುತ್ತಿದೆ. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲರನ್ನು ಸ್ಮರಿಸಬೇಕು.  ಜಿಲ್ಲೆ ರಚನೆಯಾಗುವ ಸಂದರ್ಭದಲ್ಲಿ  ಚಾಮರಾಜನಗರ ಜಿಲ್ಲೆ ಮಾಡುವಾಗ ಜೆ.ಹೆಚ್.ಪಟೇಲರು ಅತ್ಯಂತ ಸಂತೋಷದಿಂದ ಇದಕ್ಕೆ ಮುದ್ರೆ ಹಾಕಿದರು.  ಅಧಿಕಾರ ಇದ್ದ ಸಂದಃಈದಲ್ಲಿ ಸಹಾಯ ಮಾಡಿದವರನ್ನು ಸ್ಮರಿಸುವುದು ಮಾನವೀಯ ಧರ್ಮ.  ಅವರ ಸೇವೆಯನ್ನು ಸ್ಮರಿಸುತ್ತಾ ಚಾಮರಾಜನಗರಕ್ಕೆ ಹಲವಾರು ಯೋಜನೆಗಳ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.


ದುಡಿಯುವ ವರ್ಗಕ್ಕೆ ಅತ್ಯಂತ ಮಹತ್ವ ಕೊಡುತ್ತಿರುವ ಮೊಟ್ಟ ಮೊದಲು ಸರ್ಕಾರ ನಮ್ಮದು. ರೈತ ವಿದ್ಯಾ ನಿಧಿ, ಕುಶಲಕರ್ಮಿಗಳಿಗೆ ಸಹಾಯಧನ ಯೋಜನೆ, ಸ್ತ್ರೀ ಸಾಮಥ್ರ್ಯ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, ರಾಜ್ಯದ ಜನ ಹಾಗೂ ಚಾಮರಾಜನಗರ ಜಿಲ್ಲೆಯು  ಆರ್ಥಿಕವಾಗಿ ಸಲರಾಗಬೇಕು ಎಂಬ ನಿಟ್ಟಿನಲ್ಲಿ ಸರ್ಕಾರ ಸಕಾರಾತ್ಮಕವಾಗಿ ನಿರ್ಧಾರ ಕೈಗೊಳ್ಳುತ್ತಿದೆ. ಅಭಿವೃದ್ಧಿಯಲ್ಲಿ ಪಕ್ಷಬೇಧವಿಲ್ಲ. ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಸಾಮಾಜಿಕ ಸಾಮರಸ್ಯ ಮೂಡಿಸುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಿಸಲಾಗಿದೆ. ಜನಶಕ್ತಿಯ ಪರವಾಗಿ ರಾಜಶಕ್ತಿ ಸದಾ ಇರಬೇಕು. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಇದೊಂದು ಸಾಮಾಜಿಕ ಬದಲಾವಣೆಯ, ವೈಚಾರಿಕ ಕ್ರಾಂತಿಯಾಗಲಿದೆ. ಜನರಿಗೆ ನ್ಯಾಯ ಸಿಗಬೇಕಾಗಿರುವುದು ಮುಖ್ಯ. ಅಂತಿಮವಾಗಿ ಸತ್ಯವೇ ಗೆಲ್ಲಲಿದೆ ಎಂದರು.


ಇದನ್ನೂ ಓದಿ : ಮಹಿಳಾ ವಿರೋಧಿ ಕಾಂಗ್ರೆಸ್ ನಾಯಕರು ಸೋನಿಯಾರನ್ನು ಹೇಗೆ ಸಹಿಸಿಕೊಂಡರು?: ಬಿಜೆಪಿ


ಅಮೃತ ಯೋಜನೆಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. ಜಿಲ್ಲೆಯಲ್ಲಿ ಗುಂಡ್ಲುಪೇಟೆ 205 ಕೋಟಿ ರೂ., ಹನೂರು 435, ಕೊಳ್ಳೇಗಾಲಕ್ಕೆ 116 ಕೋಟಿ ಸೇರಿದಂತೆ ಒಟ್ಟು 1048 ಕೋಟಿ ರೂ.ಗಳ ಯೋಜನೆಗಳನ್ನು  ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗಿದೆ ಎಂದರು.


ಚಾಮರಾಜನಗರ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಎಂದು ಪರಿಗಣಿಸಲಾಗಿದೆ. ಇಲ್ಲಿ ಆರೋಗ್ಯ, ಮಹಿಳಾ  ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣದ ಬಗ್ಗೆ ಗಮನಹರಿಸಲಾಗಿದೆ. ಒಂದೇ ವರ್ಷದಲ್ಲಿ ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪಿಹೆಚ್ ಸಿ ಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ಚಿಕಿತ್ಸೆ, ಕನ್ನಡಕ, ಶ್ರವಣ ಸಾಧನಗಳನ್ನು ಒದಗಿಸಲಾಗುತ್ತಿದೆ. ಡಯಾಲಿಸಿಸ್ ಸೈಕಲ್ಸ್ ಹೆಚ್ಚಳ, ಕ್ಯಾನ್ಸರ್ ಚಿಕಿತ್ಸೆ ಕೇಂದ್ರಗಳ ಹೆಚ್ಚಳ  ಮಾಡಲಾಗಿದೆ. ಆರೋಗ್ಯ  ಅಭಿವೃದ್ಧಿ ಮತ್ತು ದುಡಿಯುವ ವರ್ಗಕ್ಕೆ ಬೆಂಬಲ ನೀಡಲಾಗುತ್ತಿದೆ. ಕೃಷಿಕರು ಆರ್ಥಿಕವಾಗಿ ಸದೃಢರಾಗಬೇಕು ಎಂದರು.


ಶೂನ್ಯಬಡ್ಡಿದರದಲ್ಲಿ ಕೃಷಿ ಸಾಲ, ಯಶಸ್ವಿನಿ ಯೋಜನೆ ಪುನರಾರಂಭ, 600 ಕೋಟಿ ರೂ. ವೆಚ್ಚದಲ್ಲಿ ರೈತಶಕ್ತಿ ಯೋಜನೆ, ರೈತ ವಿದ್ಯಾನಿಧಿ ಜಾರಿ ಮಾಡಲಾಗಿದೆ. ಕುಂಬಾರರು, ಕಮ್ಮಾರ ಸೇರಿದಂತೆ ಕುಲಕಸುಬುದಾರರಿಗೆ ಧನಸಹಾಯ ಮಾಡುವ ಯೋಜನೆ ಜಾರಿ ಮಾಡಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗಳಿಂದ 5 ಲಕ್ಷ ಮಹಿಳೆಯರಿಗೆ ಹಾಗೂ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.