ಬೇಲೂರು : ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ,  ಸೂಕ್ತ ಸಮಯದಲ್ಲಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಅರಿವು ಸರ್ಕಾರಕ್ಕಿದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.


COMMERCIAL BREAK
SCROLL TO CONTINUE READING

ಅವರು ಇಂದು ಬೇಲೂರು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಲಿಖಿತವಾದ ನಿರ್ದೇಶನಗಳನ್ನು ನೀಡಿದ್ದಾರೆ. ನಿನ್ನೆಯ ದಿನ ಖುದ್ದಾಗಿ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದಾರೆ. ಅಧಿಕಾರಿಗಳ ನೀತಿ ಸಂಹಿತೆಯ ಪ್ರಕಾರ ಅಧಿಕಾರಿಗಳ ನಡವಳಿಕೆ ಹಾಗೂ ಅದರಂತೆ ನಡೆದುಕೊಳ್ಳದಿದ್ದಾಗ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳಬಹುದಾದ ಶಿಸ್ತಿನ ಕ್ರಮಗಳನ್ನು  ಮುಖ್ಯಕಾರ್ಯದರ್ಶಿಗಳು ತೆಗೆದುಕೊಳ್ಳಲಿದ್ದಾರೆ ಎಂದರು.́


ಇದನ್ನೂ ಓದಿ: ರೋಹಿಣಿ ಸಿಂಧೂರಿ, ಡಿ. ರೂಪಾ ವರ್ಗಾವಣೆ ಮಾಡಿ ಸರ್ಕಾರ ಆದೇಶ..!


ಕಳೆದ ಎರಡು ಮೂರು ದಿನಗಳಿಂದ ಡಿ ರೂಪ ಮತ್ತು ರೋಹಿಣಿ ಅವರ ನಡುವೆ ಸೋಷಿಯಲ್‌ ಮೀಡಿಯಾದಲ್ಲಿ ವಾರ್‌ ನಡೆದಿತ್ತು. ರೂಪಾ ಅವರು ರೋಹಿಣಿ ಅವರ ಖಾಸಗಿ ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಅಲ್ಲದೆ, ಆರೋಪಗಳ ಮಳೆ ಸುರಿಸಿದ್ದರು. ರೋಹಿಣಿ ಸಹ ರೂಪಾ ಅವರ ಮಾನಸಿಕ ಸ್ಥಿತಿ ಸರಿಯಿಲ್ಲ ಎನ್ನುವ ಮೂಲ ಟಾಂಗ್‌ ನೀಡಿದ್ದರು. ಇಬ್ಬರ ಜಗಳ ವಿಧಾನಸಭೆವರೆಗೂ ಹೋದ ಹಿನ್ನೆಲೆ ಸರ್ಕಾರ ಮುಜುಗರಕ್ಕೆ ಒಳಗಾಗಿತ್ತು. ಇದೀಗ ಐಎಎಸ್‌ ಐಪಿಎಸ್‌ ಅಧಿಕಾರಿಗಳ ಜಗಳಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.