ದಾವಣಗೆರೆ ಉತ್ತರ ಕ್ಷೇತ್ರದಿಂದ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧೆ ಸಾಧ್ಯತೆ..!

ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

Written by - Zee Kannada News Desk | Last Updated : Mar 13, 2022, 09:54 AM IST
  • ನಾನು ಮುಂದಿನ ಚುನಾವಣೆಗೆ ನಿಲ್ಲೋದಿಲ್ಲ, ಯಾರೇ ಬಂದ್ರೂ ಗೆಲ್ಲಿಸಿ ಕಳುಹಿಸೋದು ನಮ್ಮ ಜವಾಬ್ದಾರಿ,
  • ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸ್ವಾಗತ ಮಾಡಿದ್ದೇವೆ"
ದಾವಣಗೆರೆ ಉತ್ತರ ಕ್ಷೇತ್ರದಿಂದ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪರ್ಧೆ ಸಾಧ್ಯತೆ..! title=

ದಾವಣಗೆರೆ : ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಾಗಲೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai) ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ-ಸಿಎಂ ಬೊಮ್ಮಾಯಿ ವಿಶ್ವಾಸ

ಈಗಾಗಲೇ ಈ ವಿಚಾರವಾಗಿ ದಾವಣಗೇರಿಯಲ್ಲಿ ಎರಡು ಸುತ್ತಿನ ಮಾತುಕತೆಯನ್ನು ಅವರು ನಡೆಸಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ.ದಾವಣಗೆರೆ (Davanagere) ಸಂಸದ ಜಿಎಂ ಸಿದ್ದೇಶ್ವರ್, ಶಾಸಕ ರವೀಂದ್ರನಾಥ್ ಗೆ ಚುನಾವಣೆಯ ಜವಾಬ್ದಾರಿಯನ್ನು ವಹಿಸಲಾಗಿದೆ ಎನ್ನುವ ಮಾತುಗಳು ಬಲವಾಗಿ ಕೇಳಿ ಬರುತ್ತಿವೆ.

ಇದನ್ನೂ ಓದಿ: ವಿಜ್ಞಾನಿಗಳ ಅವಿಷ್ಕಾರಗಳು ಸಾಮಾನ್ಯ ಜನರಿಗೆ ತಲುಪುವಂತಾಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈಗ ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕ ರವೀಂದ್ರ ನಾಥ್ ಅವರು "ಈಗಾಗಲೇ ಮಾತುಕತೆ ಆಗಿದೆ, ನಮ್ಮ ಕ್ಷೇತ್ರಕ್ಕೆ ಸಿಎಂ ಬಂದ್ರೆ ಗೆಲ್ಲಿಸಿ ಕಳುಹಿಸೋದು ನಮ್ಮ ಕರ್ತವ್ಯ, ಸ್ಪರ್ಧೆ ಬಗ್ಗೆ ದಾವಣಗೆರೆ ಸಂಸದರ ಜೊತೆ ಮಾತನಾಡಿದ್ದಾರೆ' ಎಂದು ಅವರು ತಿಳಿಸಿದ್ದಾರೆ.

"ನಾನು ಮುಂದಿನ ಚುನಾವಣೆಗೆ ನಿಲ್ಲೋದಿಲ್ಲ, ಯಾರೇ ಬಂದ್ರೂ ಗೆಲ್ಲಿಸಿ ಕಳುಹಿಸೋದು ನಮ್ಮ ಜವಾಬ್ದಾರಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಸ್ವಾಗತ ಮಾಡಿದ್ದೇವೆ" ಎಂದು ದಾವಣಗೆರೆಯ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಎ ರವೀಂದ್ರನಾಥ್ ಹೇಳಿಕೆ ನೀಡಿದ್ದಾರೆ.ಇದು ಅಂತಿಮಗೊಂಡಲ್ಲಿ ಬಸವರಾಜ್ ಬೊಮ್ಮಾಯಿ ಶಿಗ್ಗಾವಿ ಜೊತೆಗೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News