Basavaraj Bommai : ಪಕ್ಷಾಂತರ ಕೇವಲ ಊಹಾಪೋಹ, ಸಿಎಂ ಬೊಮ್ಮಾಯಿ ಸ್ಪಷ್ಟನೆ

ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ನಿಖರವಾಗಿ ಹೇಳಬಹುದು. ಬೇರೆ ಪಕ್ಷದಿಂದ ಬಿಜೆಪಿಗೆ  ಬರುವವರ ಬಗ್ಗೆ ಕಾಡು ನೋಡಿ ಎಂದರು. 

Written by - Prashobh Devanahalli | Last Updated : Mar 13, 2022, 04:57 PM IST
  • ಬಿಜೆಪಿಯಿಂದ ಯಾರೂ ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ
  • ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ
  • ಮಾರ್ಚ್ 30 ಹಾಗೂ 31 ರಂದು ರಾಜ್ಯ ಕಾರ್ಯಕಾರಿಣಿ ಸಭೆ
Basavaraj Bommai : ಪಕ್ಷಾಂತರ ಕೇವಲ ಊಹಾಪೋಹ, ಸಿಎಂ ಬೊಮ್ಮಾಯಿ ಸ್ಪಷ್ಟನೆ title=

ಬೆಂಗಳೂರು : ಬಿಜೆಪಿಯಿಂದ ಯಾರೂ  ಪಕ್ಷಾಂತರ ಮಾಡುವ ಪ್ರಶ್ನೆಯೇ ಇಲ್ಲ. ಮೊದಲೂ ಇರಲಿಲ್ಲ.ಈಗಲೂ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಇಂದು ತಮ್ಮ ನಿವಾಸದ ಬಳಿ  ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), ನಮ್ಮ ಪಕ್ಷದಿಂದ ಯಾರೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದು ನಿಖರವಾಗಿ ಹೇಳಬಹುದು. ಬೇರೆ ಪಕ್ಷದಿಂದ ಬಿಜೆಪಿಗೆ  ಬರುವವರ ಬಗ್ಗೆ ಕಾದು ನೋಡಿ ಎಂದರು. 

ಇದನ್ನೂ ಓದಿ : ಮುಖ್ಯಮಂತ್ರಿ ಅಭ್ಯರ್ಥಿಯನ್ನು ಒಟ್ಟಿಗೆ ಘೋಷಿಸಿ ನೋಡೋಣ? ಡಿಕೆಶಿ-ಸಿದ್ದುಗೆ ಬಿಜೆಪಿ ಸವಾಲು

ರಾಜ್ಯ ಪ್ರವಾಸ : 

ಮಾರ್ಚ್ 30 ಹಾಗೂ 31 ರಂದು ರಾಜ್ಯ ಕಾರ್ಯಕಾರಿಣಿ ಸಭೆ(BJP State Executive Meeting) ನಡೆಯಲಿದೆ. ಸಭೆಯಲ್ಲಿ ರಾಜ್ಯ ಪ್ರವಾಸದ ಕುರಿತು ಹಾಗೂ ಎಲ್ಲ ವಿಷಯಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು. 

ಅವಧಿ ಪೂರ್ವ ಚುನಾವಣೆ(Election)ಯ ಸಾಧ್ಯತೆಯನ್ನು ತಳ್ಳಿಹಾಕಿದ ಮುಖ್ಯ ಮಂತ್ರಿಗಳು  ಸಂಪುಟ ವಿಸ್ತರಣೆ ಕುರಿತು ವರಿಷ್ಠರಿಂದ ಸೂಚನೆ ಬಂದ ಕೂಡಲೇ ದೆಹಲಿಗೆ ತೆರಳುವುದಾಗಿ ಹೇಳಿದರು.

ಉಕ್ರೇನ್(Ukraine) ನಲ್ಲಿ ಬಾಂಬ್ ದಾಳಿ ನಿಂತ ಕೂಡಲೇ ನವೀನ್ ಮೃತ ದೇಹ ತರುವ ಬಗ್ಗೆ ಪ್ರಕ್ರಿಯೆಗೆ ಪುನಃ ಚಾಲನೆ ನೀಡಲಾಗುವುದು ಎಂದರು.

ಇದನ್ನೂ ಓದಿ : 'ಪಂಜಾಬ್ ಕಾಂಗ್ರೆಸ್ ಸಿಧು ಹಾಳು ಮಾಡಿದಂತೆ ಕರ್ನಾಟಕ ಕಾಂಗ್ರೆಸ್ಸನ್ನ ಸಿದ್ಧು ಹಾಳ ಮಾಡ್ತಾರೆ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News