ಬೆಂಗಳೂರು: ಇಂದಿನಿಂದ(ಆಗಸ್ಟ್ 23) ಶಾಲಾ-ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಆರಂಭವಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ ಬಡಾವಣೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯ(Basavaraj Bommai)ವರು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  


COMMERCIAL BREAK
SCROLL TO CONTINUE READING

ಸಸಿ ನೆಡುವ ಮೂಲಕ ಭೌತಿಕ ತರಗತಿಗಳ ಪುನರಾರಂಭಕ್ಕೆ ಸಿಎಂ ಬೊಮ್ಮಾಯಿ ಸೋಮವಾರ ಚಾಲನೆ ನೀಡಿದರು. ಬಳಿಕ ಕಾಲೇಜಿನ ಕೊಠಡಿಗಳಿಗೆ ಭೇಟಿ ನೀಡಿ ಕೋವಿಡ್-19(COVID-19) ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ ಸಿದ್ಧತೆಯನ್ನು ಪರಿಶೀಲಿಸಿದರು. ಇದೇ ವೇಳೆ ಯಾವುದೇ ಆತಂಕವಿಲ್ಲದೆ ಕಾಲೇಜಿಗೆ ಬರುವಂತೆ ವಿದ್ಯಾರ್ಥಿಗಳಿಗೆ ಸಿಎಂ ಆಹ್ವಾನಿಸಿದರು. ಮಕ್ಕಳಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಿದ ಸಿಎಂ ಕೋವಿಡ್-19 ರೂಲ್ಸ್ ಪಾಲಿಸುವಂತೆ ಮನವಿ ಮಾಡಿದರು.  


ಇದನ್ನೂ ಓದಿ: KSP Recruitment 2021: ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಂಪೂರ್ಣ ಮಾಹಿತಿ ಇಲ್ಲಿದೆ


Nirmala Rani High School)ಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಯಾವುದೇ ಆತಂಕವಿಲ್ಲದೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರಬಹುದು. ಆದರೆ ಕೊರೊನಾ ಬಗ್ಗೆ ಅತ್ಯಂತ ಎಚ್ಚರಿಕೆ ವಹಿಸಬೇಕು ಅಂತಾ ಸಲಹೆ ನೀಡಿದರು. ಕೋವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಕೊರೊನಾವನ್ನು ಹೊಡೆದೊಡಿಸಬಹುದು ಅಂತಾ ವಿದ್ಯಾರ್ಥಿಗಳಲ್ಲಿ ಸಿಎಂ ಜಾಗೃತಿ ಮೂಡಿಸಿದರು.


ಕೋವಿಡ್​ನಿಂದ ಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಿದೆ


ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai), ‘ಕೋವಿಡ್​-19ನಿಂದ ಮಕ್ಕಳಿಗೆ ಇಂದು ಸ್ವಾತಂತ್ರ್ಯ ಸಿಕ್ಕಿದೆ. ಕೊರೊನಾ ಕಡಿಮೆಯಾಗಿ ಶಾಲಾರಂಭವು ಯಶಸ್ವಿ ಆಗಬೇಕು’ ಅಂತಾ ಹೇಳಿದರು. ಗಡಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಕಡಿಮೆಯಾದರೆ ಅಲ್ಲಿಯೂ ಕೂಡ ಶಾಲೆ ಆರಂಭಿಸಲಾಗುವುದು. 1 ರಿಂದ 8ರವರೆಗಿನ ತರಗತಿ ತೆರೆಯಲು ವರದಿ ನೀಡುವಂತೆ ತಜ್ಞರ ಸಮಿತಿಗೆ ಸೂಚಿಸಿದ್ದೇನೆ’ ಎಂದು ಹೇಳಿದರು.


ಇದನ್ನೂ ಓದಿ: ವಿಶ್ವಪ್ರಸಿದ್ಧ ಹಂಪಿಗೆ ಭೇಟಿ ನೀಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ