ಬೆಂಗಳೂರು : ಸೂಪರ್ ಮಾರುಕಟ್ಟೆಗಳಲ್ಲಿ ಮದ್ಯ ಮಾರಾಟ ಮಾಡುವ ಪ್ರಸ್ತಾವನೆಯನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. 


COMMERCIAL BREAK
SCROLL TO CONTINUE READING

ಗೃಹ ಕಚೇರಿ ಕೃಷ್ಣಾದಲ್ಲಿ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಈ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ. ಬೆಂಗಳೂರು ಮಹಾನಗರ, ಜಿಲ್ಲಾ ಕೇಂದ್ರಗಳ ಸೂಪರ್‌ ಮಾರುಕಟ್ಟೆ, ಹೈಪರ್‌ ಮಾರುಕಟ್ಟೆ ಹಾಗೂ ಮಾಲ್‌ಗಳಲ್ಲಿ ಸಿಎಲ್‌-2 (ಎ) ಎಂಬ ಹೊಸ ಸನ್ನದು ಮಂಜೂರು ಮಾಡಬೇಕು.ಕನಿಷ್ಠ 7,500 ಚದರಡಿ ವಿಸ್ತೀರ್ಣವಿರುವ ಮಾಲ್, ಸೂಪರ್‌ ಮಾರುಕಟ್ಟೆಗಳಲ್ಲಿ 400 ಚದರಡಿ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಮದ್ಯ ಮಳಿಗೆ ಮಾಡಲು ಅನುಮತಿ ನೀಡಲು ಪ್ರಸ್ತಾಪ ಇತ್ತು. 


ದೇಶಾದ್ಯಂತ HMT ಭೂಮಿ ಒತ್ತುವರಿ ತೆರವಿಗೆ ಕ್ರಮ: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ


ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಸೂಪರ್ ಮಾರುಕಟ್ಟೆಗಳಲ್ಲಿ ಮದ್ಯ ಮಾರಾಟ ಮಾಡಲು ಪರವಾನಿಗೆ ಕೊಡವುದು ಬೇಡ ಎಂದು ಸೂಚಿಸಿದರು. ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್


ನಿಗದಿತ ಗುರಿಯಂತೆ ಅಬಕಾರಿ ಆದಾಯ ಸಂಗ್ರಹಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸದ್ಯದ ಆದಾಯ ಸಂಗ್ರಹದ ಸ್ಥಿತಿಗತಿ ಅವಲೋಕಿಸಿದ ಸಿಎಂ ಅಬಕಾರಿ ಆದಾಯ ನಿಗದಿತ ಗುರಿ ಮುಟ್ಟುವಂತೆ ಸೂಚಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.