ಯಡಿಯೂರಪ್ಪಗೆ ರೈತರ ಹಿತಕ್ಕಿಂತ ಸರ್ಕಾರ ಉಳಿಸಿಕೊಳ್ಳೋದೇ ಮುಖ್ಯವಾಗಿದೆ: ಡಿ.ಕೆ. ಶಿವಕುಮಾರ್

ಪ್ರತಿ ದಿನವೂ ಬೆಲೆ ಏರಿಕೆ ಆಗುತ್ತಿದೆ. ಜನ ಸಾಮಾನ್ಯರ ಜೀವನವೇ ದುಸ್ಸರವಾಗಿರುವಾಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೊರೊನಾ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ.‌ ಆದುದರಿಂದ ಕೂಡಲೇ ವಿದ್ಯುತ್ ದರ ಇಳಿಕೆ ಮಾಡುಬೇಕು ಎಂದು ಒತ್ತಾಯ ಮಾಡಿದರು.

Last Updated : Nov 23, 2020, 01:12 PM IST
  • ರೈತ ತಾನು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ.
  • ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ.
  • ಮೆಕ್ಕೆಜೋಳದ ಬೆಲೆಯೂ ಸಂಪೂರ್ಣ ಕುಸಿದಿದೆ.
ಯಡಿಯೂರಪ್ಪಗೆ ರೈತರ ಹಿತಕ್ಕಿಂತ ಸರ್ಕಾರ ಉಳಿಸಿಕೊಳ್ಳೋದೇ ಮುಖ್ಯವಾಗಿದೆ: ಡಿ.ಕೆ. ಶಿವಕುಮಾರ್ title=

ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಮ್ಮ‌ ಸರ್ಕಾರ ಉಳಿಸಿಕೊಳ್ಳುವುದು ಮುಖ್ಯವಾಗಿದೆಯೇ ಹೊರತು ಸಂಕಷ್ಟದಲ್ಲಿರುವ ರಾಜ್ಯದ ರೈತರ ಹಿತ ಅವರಿಗೆ ಬೇಕಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಹಿಟ್ನಾಳದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ. ಶಿವಕುಮಾರ್ (DK Shivakumar), ರೈತ ತಾನು ಬೆಳೆದ ಬೆಳೆಗಳಿಗೆ ಬೆಲೆ ಇಲ್ಲದೆ ಕಂಗಾಲಾಗಿದ್ದಾನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರೈತರ ಹಿತ ಕಾಯುವುದನ್ನು ಬಿಟ್ಟು ತಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತು ನಡೆಸುತ್ತಿದ್ದಾರೆ ಎಂದರು.

ಕೊಪ್ಪಳ-ರಾಯಚೂರು ಭಾಗದಲ್ಲಿ ಬೆಳೆದ ಭತ್ತಕ್ಕೆ ಬೆಲೆ ಸಿಗುತ್ತಿಲ್ಲ. ಈಗಿರುವ ಭತ್ತದ ಬೆಲೆ ಜೊತೆಗೆ ಹೆಚ್ಚುವರಿ 500 ರೂ. ಬೆಂಬಲ ನೀಡಬೇಕು. ಮೆಕ್ಕೆಜೋಳದ ಬೆಲೆಯೂ ಸಂಪೂರ್ಣ ಕುಸಿದಿದೆ. ಕೂಡಲೇ ಖರೀದಿ ಕೇಂದ್ರ ಆರಂಭ ಮಾಡಬೇಕು ಎಂದು ಆಗ್ರಹಿಸಿದರು.

PM Kisan: ಮುಂದಿನ ತಿಂಗಳು ಯಾವ ರೈತರಿಗೆ ಸಿಗಲಿದೆ 2000ರೂ., ನಿಮ್ಮ ಹೆಸರನ್ನು ಹೀಗೆ ಪರಿಶೀಲಿಸಿ

ಪ್ರತಿ ದಿನವೂ ಬೆಲೆ ಏರಿಕೆ ಆಗುತ್ತಿದೆ. ಜನ ಸಾಮಾನ್ಯರ ಜೀವನವೇ ದುಸ್ಸರವಾಗಿರುವಾಗ ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೊರೊನಾ ವರ್ಷದಲ್ಲಿ ಜನರು ತುಂಬ ಸಂಕಷ್ಟ ಎದುರಿಸುತ್ತಿದ್ದಾರೆ.‌ ಆದುದರಿಂದ ಕೂಡಲೇ ವಿದ್ಯುತ್ ದರ ಇಳಿಕೆ ಮಾಡುಬೇಕು ಎಂದು ಒತ್ತಾಯ ಮಾಡಿದರು.

ಈ ಕುಟುಂಬಗಳಿಗೆ ಸಿಗುವುದಿಲ್ಲ PM-KISAN ಯೋಜನೆಯ ಲಾಭ

ಬಿಜೆಪಿ ಜಾತಿ-ಜಾತಿಗಳನ್ನು ಕೂಡಿಸುವುದನ್ನು ಬಿಟ್ಟು ಒಡೆಯುವ ಕೆಲಸ ಮಾಡುತ್ತಿದೆ.‌ ಮರಾಠ ಅಭಿವೃದ್ಧಿ ನಿಗಮ‌ ಸ್ಥಾಪನೆ ಮಾಡಿದ್ದಾರೆ. ಹೀಗೆ ಜಾತಿಗೊಂದು ನಿಗಮ ಮಾಡಲು ಹೊರಟಿದ್ದಾರೆ. ರೈತರ (Farmers) ಬೆಳೆಗೆ ಬೆಂಬಲ ಬೆಲೆ ಸೇರಿ ನಿಗಮಗಳ ಕುರಿತಂತೆ ಸುದೀರ್ಘ ಚರ್ಚೆ ನಡೆಸಲು ನವೆಂಬರ್ 30ರಂದು ಪಕ್ಷದ ಹಿರಿಯ ನಾಯಕರ ಸಭೆ ಕರೆದಿದ್ದೇನೆ. ಸಭೆಯಲ್ಲಿ ಹಲವು ವಿಚಾರಗಳ ಕುರಿತು ಸುದೀರ್ಘ ಚರ್ಚೆ ನಡೆಯಲಿದೆ ಎಂದರು.

ಸದ್ಯಕ್ಕೆ ಶಾಲೆ ತೆರೆಯಬೇಡಿ: ರಾಜ್ಯ ಸರ್ಕಾರಕ್ಕೆ ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿ ಶಿಫಾರಸು

ಸರ್ಕಾರ ಶಾಲೆಗಳ ಆರಂಭದ ಕುರಿತು ಚರ್ಚೆ ನಡೆಸುತ್ತಿದೆ. ಅವರು ಏನು ನಿರ್ಧಾರ ಕೈಗೊಳ್ತಾರೋ ನೋಡೋಣ. ನಮ್ಮ ಅಭಿಪ್ರಾಯವನ್ನು ಅವರು ಕೇಳಿಲ್ಲ. ಈ ಹಿಂದೆ ಒಂದು ಬಾರಿ ನಮ್ಮ ಸಲಹೆ ಕೇಳಿದ್ದರು.‌ ಶಾಲೆ ಆರಂಭದ ಕುರಿತು ಸರ್ಕಾರದ ನಿರ್ಧಾರದ ಮೇಲೆ ನಾವು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸಣ್ಣ ಅಂತರದಿಂದ ಸೋತ ಬಸವನಗೌಡ ತುರ್ವಿಹಾಳ ಅವರನ್ನು ನಮ್ಮ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಿದ್ದೇವೆ. ಎಲ್ಲರೂ ಚುನಾವಣಾ ತಯಾರಿ ನಡೆಸಲು ಸಿದ್ದರಾಗಿದ್ದಾರೆ. ಕಾಂಗ್ರೆಸ್ ನಿಂದ‌ ಬಿಜೆಪಿಗೆ ಹೋಗುವವರು ಯಾರೂ ಇಲ್ಲ. ಬಿಜೆಪಿಯಿಂದಲೇ ಕಾಂಗ್ರೆಸ್ (Congress) ಗೆ ಬರ್ತಾರೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಶಾಸಕರಾದ ಅಮರೆಗೌಡ ಬಯ್ಯಾಪುರ, ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕೆಪಿಸಿಸಿ ಕಾರ್ಯದರ್ಶಿ ಶಿವಕುಮಾರ್ ಮೆಣಸಿನಕಾಯಿ ಮತ್ತಿತರರು ಉಪಸ್ಥಿತರಿದ್ದರು.
 

Trending News