ದೆಹಲಿಗೆ ತೆರಳಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.


COMMERCIAL BREAK
SCROLL TO CONTINUE READING

"ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ" ಬಗ್ಗೆ ಕೇಳಿದಾಗ, "ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮದ್ಯೆ, ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ" ಎಂದು ತಿಳಿಸಿದರು.


ಇದನ್ನು ಓದಿ : 10 ಸಾವಿರದೊಳಗೆ ಉತ್ತಮ ಕ್ಯಾಮೆರಾವುಳ್ಳ ಮೊಬೈಲ್ ಹುಡುಕುತ್ತಿದ್ದೀರಾ, ಹಾಗಾದ್ರೆ ಇಲ್ಲಿವೆ ಕೆಲವು ಆಯ್ಕೆಗಳು!! 


"ಸಚಿವ ಸ್ಥಾನ ಬಿಡಲು ಸಿದ್ಧ ನನನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ" ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ "ಅದಕ್ಕೆ ಉತ್ತರ ಕೊಡುತ್ತೇವೆ" ಎಂದರು.


ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ:


ದೆಹಲಿ ಭೇಟಿಯ ಬಗ್ಗೆ ಕೇಳಿದಾಗ, “ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ಚರ್ಚೆ ಮಾಡಲಾಗುವುದು” ಎಂದು ತಿಳಿಸಿದರು.


ಇದನ್ನು ಓದಿ : ಏಥರ್ ಕಂಪನಿ ರಾಜ್ಯ ತೊರೆಯಲು ಬೊಮ್ಮಾಯಿ ಸರಕಾರ ಕಾರಣ: ಸಚಿವ ಎಂ ಬಿ ಪಾಟೀಲ


"ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ" ಎಂದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.