ಬೆಳಗಾವಿ ವಿಟಿಯು ವಿಭಜನೆ ಇಲ್ಲ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ

ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು- ಸಿಎಂ

Last Updated : Feb 19, 2019, 12:54 PM IST
ಬೆಳಗಾವಿ ವಿಟಿಯು ವಿಭಜನೆ ಇಲ್ಲ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟನೆ title=
File Image

ಬೆಂಗಳೂರು: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ  ಸ್ಪಷ್ಟ ಪಡಿಸಿದ್ದಾರೆ.

ನಿನ್ನೆ ಸಮಾರಂಭವೊಂದರಲ್ಲಿ ತಮ್ಮ ಹೇಳಿಕೆ ಕುರಿತು ತಪ್ಪಾಗಿ ಗ್ರಹಿಸಲಾಗಿದೆ. 
ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ವಿಟಿಯು ವಿಭಜನೆ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂದು ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

Trending News