ಯಾದಗಿರಿ: ಅಪಘಾತವೊಂದರಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೈ ಮತ್ತು ಕಾಲುಗಳು ಶಕ್ತಿಹೀನವಾಗಿ ಹಾಸಿಗೆ ಹಿಡಿದಿರುವ ಯಾದಗಿರಿ ತಾಲೂಕಿನ ಮುನಗಲ್ ಗ್ರಾಮದ ಇಂಜಿನಿಯರಿಂಗ್ ಪದವೀಧರ ಭೀಮರೆಡ್ಡಿ ಶಂಕರಪ್ಪ ಅವರ ತಂದೆಗೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಗುರುಮಠಕಲ್ ತಾಲೂಕಿನ ಚಂಡ್ರಕಿಯಲ್ಲಿ ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಹಸ್ತಾಂತರಿಸಿದರು.


COMMERCIAL BREAK
SCROLL TO CONTINUE READING

ನಿನ್ನೆ ಜೂನ್ 21 ರಂದು ನಡೆದ ಜನತಾದರ್ಶನದಲ್ಲಿ ಯುವಕನ ತಾಯಿ ಭಾಗವಹಿಸಿ, ಮಗನ ಚಿಕಿತ್ಸೆಗಾಗಿ ಮನೆ, ಹೊಲ, ಎತ್ತುಗಳನ್ನು ಕಳೆದುಕೊಂಡು ಮೂವತ್ತು ಲಕ್ಷಕ್ಕೂ ಅಧಿಕ ಹಣ ಖರ್ಚು ಮಾಡಿದರೂ, ಗುಣಮುಖವಾಗಿಲ್ಲ ಎಂದು ದುಃಖ ತೋಡಿಕೊಂಡಿದ್ದರು. 


ಅಹವಾಲು ಸ್ವೀಕರಿಸಿದ್ದ ಮುಖ್ಯಮಂತ್ರಿಗಳು ಕೂಡಲೇ ಸ್ಪಂದಿಸಿ ಬೆಳಿಗ್ಗೆ ಬಂದು ಐದು ಲಕ್ಷ ರೂ.ಗಳ ಪರಿಹಾರದ ಚೆಕ್ ಸ್ವೀಕರಿಸಲು ಭೀಮರೆಡ್ಡಿ ಅವರ ಪಾಲಕರಿಗೆ ತಿಳಿಸಿದ್ದರು. 


ಕೊಟ್ಟ ಭರವಸೆಯಂತೆ  ಇಂದು ಜೂನ್ 22 ರಂದು  ಬೆಳಿಗ್ಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಮತ್ತಿತರರು ಉಪಸ್ಥಿತರಿದ್ದರು.