ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಕುಮಾರಸ್ವಾಮಿ

     

Last Updated : Jun 18, 2018, 04:29 PM IST
ದೆಹಲಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಸಿಎಂ ಕುಮಾರಸ್ವಾಮಿ title=

ನವದೆಹಲಿ: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಕೇಂದ್ರ ಜಲ ಸಂಪನ್ಮೂಲ ಸಚಿವ  ನಿತಿನ್ ಗಡ್ಕರಿಯವರನ್ನು ಸಾರಿಗೆ ಭವನದಲ್ಲಿ ಭೇಟಿಯಾದರು.

ಇದೇ ವೇಳೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಕುರಿತು ಚರ್ಚೆ ಚರ್ಚೆ ನಡೆಸಿದರು. ಅಲ್ಲದೆ ರಾಜ್ಯದಲ್ಲಿನ ಸಣ್ಣ ನೀರಾವರಿ ಮತ್ತು ಲೋಕೋಪಯೋಗಿ ಇಲಾಖೆಗಳಿಗೆ ಹೆಚ್ಚಿಗೆ ಅನುದಾನ ನೀಡುವಂತೆ ಕೇಂದ್ರ ಸಚಿವ ಗಡ್ಕರಿಯವರಲ್ಲಿ ಮುಖ್ಯಮಂತ್ರಿಗಳು ಮನವಿ ಮಾಡಿಕೊಂಡರು.

ಇದೇ ವೇಳೆ ಮುಖ್ಯಮಂತ್ರಿಗಳಿಗೆ ಸಚಿವ ಹೆಚ್ ಡಿ ರೇವಣ್ಣ ಮತ್ತು ಸಿ ಎಸ್ ಪುಟ್ಟರಾಜ ಅವರು ಉಪಸ್ಥಿತರಿದ್ದರು.ನೀತಿಆಯೋಗದ ಸಭೆಯಲ್ಲಿ ಪಾಲ್ಗೊಳ್ಳಲು ಬಂಧಿದ್ದ ಕುಮಾರಸ್ವಾಮಿ ಇದೇ ವೇಳೆ ಸಂಬಂಧಪಟ್ಟ ಇಲಾಖೆಗಳ ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಅನುಧಾನದ ಹಾಗೂ ಯೋಜನೆಗಳ ವಿಚಾರದಲ್ಲಿ ಸಹಕಾರ ನೀಡಬೇಕೆಂದು ಕೇಳಿಕೊಂಡರು.

 

 

 

Trending News