ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಹೆಚ್‌ಡಿಕೆಗೆ ಸೋಲು ಖಚಿತ: ಬಿ.ಎಸ್.ಯಡಿಯೂರಪ್ಪ

ಗುರುವಾರ ನಡೆಯಲಿರುವ ವಿಶ್ವಾಸ ಮತಯಾಚನೆಯಲ್ಲಿ ಸಿಎಂ ಸೋತು ರಾಜೀನಾಮೆ ನೀಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದು ಯಡಿಯೂರಪ್ಪ ಹೇಳಿದರು.

Last Updated : Jul 15, 2019, 07:10 PM IST
ವಿಶ್ವಾಸಮತ ಯಾಚನೆಯಲ್ಲಿ ಸಿಎಂ ಹೆಚ್‌ಡಿಕೆಗೆ ಸೋಲು ಖಚಿತ: ಬಿ.ಎಸ್.ಯಡಿಯೂರಪ್ಪ title=
File Photo, Courtesy: ANI

ಬೆಂಗಳೂರು: ಗುರುವಾರ ನಡೆಯಲಿರುವ ವಿಶ್ವಾಸ ಮತ ಯಾಚನೆಯಲ್ಲಿ ಸಿಎಂ ಕುಮಾರಸ್ವಾಮಿ ಅವರಿಗೆ ಸೋಲು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. 

ವಿಧಾನಸಭಾ ಕಾರ್ಯ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮೊದಲಿಗೆ ವಿಶ್ವಾಸ ಮತ ಯಾಚನೆಗೆ ದಿನ ನಿಗದಿಮಾಡಿದ ಸ್ಪೀಕರ್ ನಡೆಯನ್ನು ಸ್ವಾಗತಿಸಿದರು.  

ಮುಂದುವರೆದು ಮಾತನಾಡುತ್ತಾ, ಇಂದೇ ನಾವು ಅವಿಶ್ವಾಸ ನಿರ್ಣಯ ಮಂಡನೆಗೆ ಸಿದ್ಧವಾಗಿದ್ದೆವು. ಆದರೆ ಕಲಾಪ ಸಲಹಾ ಸಮಿತಿಗೆ ಅರ್ಜಿ ಸಲ್ಲಿಸಿರಲಿಲ್ಲ. ಹೀಗಾಗಿ ಸ್ಪೀಕರ್ ನಮ್ಮ ಮನವಿಗೆ ಸಮ್ಮತಿಸಲಿಲ್ಲ. ಆದರೆ ಗುರುವಾರ ನಡೆಯಲಿರುವ ವಿಶ್ವಾಸ ಮತಯಾಚನೆಯಲ್ಲಿ ಸಿಎಂ ಸೋತು ರಾಜೀನಾಮೆ ನೀಡಲಿದ್ದಾರೆ ಎಂಬ ವಿಶ್ವಾಸ ನಮಗಿದೆ ಎಂದು ಯಡಿಯೂರಪ್ಪ ಹೇಳಿದರು.

Trending News