ಬೆಂಗಳೂರು: ಗ್ಯಾರಂಟಿ ಯೋಜನೆಗೆ ಬೊಕ್ಕಸ ಖಾಲಿ ಮಾಡಿದ್ರೆ ನಾವೇನೂ ಮಾಡಲಾಗದು ಎಂಬ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾದ್ದಾಳಿ ನಡೆಸಿದ್ದಾರೆ. 


COMMERCIAL BREAK
SCROLL TO CONTINUE READING

ʼಗ್ಯಾರಂಟಿ ಯೋಜನೆಗಳ ಬಗ್ಗೆ  ವಿರೋಧವಿದ್ದರೆ ಬಿಜೆಪಿ ನಾಯಕರು ಅದನ್ನು ಕಂತುಗಳಲ್ಲಿ ಹೇಳುವುದನ್ನು ಬಿಟ್ಟು ಒಂದೇ ಬಾರಿ ನೇರವಾಗಿ, ಸ್ಪಷ್ಟವಾಗಿ ಹೇಳಿಬಿಡಬೇಕು. ಅದೇ ರೀತಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಾಗಿ ಆ ರಾಜ್ಯಗಳಲ್ಲಿ ಘೋಷಣೆ ಮಾಡಬೇಕು. ಈ ಮೂಲಕ ತಮ್ಮ ದಮ್ಮು ತಾಖತ್ ತೋರಿಸಬೇಕು. ಆಗಾಗ ಗೊಣಗಾಡಿಕೊಂಡರೆ ಏನು ಫಲ ಅಮಿತ್‌ ಶಾ ಅವರೇ?ʼ ಎಂದು ಟೀಕಿಸಿದ್ದಾರೆ.


ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧೆ ವಿಚಾರ; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ: ನಿಖಿಲ್ ಕುಮಾರಸ್ವಾಮಿ


ಕರ್ನಾಟಕದ ಬಗ್ಗೆ ಮಾತನಾಡುವಾಗ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ಬಿಜೆಪಿ ನಾಯಕರು ತಮ್ಮ ಆಳ್ವಿಕೆಯ ರಾಜ್ಯಗಳಲ್ಲಿ ಅದೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆ ನೀಡುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಗ್ಯಾರಂಟಿಯ ಯೋಜನೆಗಳನ್ನು ಮಾತ್ರ ಅಲ್ಲ, ಗ್ಯಾರಂಟಿ ಎಂಬ ಹೆಸರನ್ನೂ ಕದ್ದು ಈಗ ಅದೇ ಹೆಸರಲ್ಲಿ ಜಾಹೀರಾತು ನೀಡಿದ್ದಾರೆ. ಇದು ಆ ಪಕ್ಷದ ಬಡಜನ ವಿರೋಧಿ ನಿಲುವು ಮತ್ತು ಬೌದ್ದಿಕ ದಿವಾಳಿತನವನ್ನು ತೋರಿಸುತ್ತದೆʼ ಎಂದು ಕಿಡಿಕಾರಿದ್ದಾರೆ.


ರಾಜ್ಯ ಸರ್ಕಾರದಿಂದ ರೂ 628 ಕೋಟಿ ಅನುದಾನ ರೈತರ ಖಾತೆಗೆ ಬಿಡುಗಡೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ


ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ ಮೇಲೆ ಅಮುಲ್ ಹೇರುವ ಹುನ್ನಾರ ಇವೆಲ್ಲವೂ ಅಮಿತ್ ಶಾ ಸಾಧನೆಗಳು. ಕೇಂದ್ರ ಬಿಜೆಪಿ ಸರ್ಕಾರ ಬರಪರಿಹಾರ ನೀಡಬೇಕೆಂದರೆ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತೀರ್ಮಾನಿಸಬೇಕು. ಕನ್ನಡಿಗರ ವಿರೋಧಿಯಾಗಿರುವ ಅಮಿತ್ ಶಾ ಅವರು ಆ ಸಭೆಯನ್ನೇ ಕರೆಯುತ್ತಿಲ್ಲ. ಇಂತಹವರು ರಾಜ್ಯಕ್ಕೆ ಬಂದು ನಮಗೆ ಪಾಠ ಮಾಡುತ್ತಿದ್ದಾರೆ. ಬಡವರ ಕಷ್ಟ ಕಡಿಮೆ ಮಾಡುವ, ಕಣ್ಣೀರು ಒರೆಸುವ ಕೆಲಸವೇ ನಿಜವಾದ ದೈವ ಭಕ್ತಿ ಎಂದು ತಿಳಿದುಕೊಂಡವನು ನಾನು. ಬಡವರ ಹೊಟ್ಟೆಗೆ ಹೊಡೆಯುವ ಕೆಲಸ ಮಾಡಿ ಎಷ್ಟು ಬಾರಿ ರಾಮನಾಮ ಹೇಳಿದರೂ ಅದು ವ್ಯರ್ಥ. ಬಡವರಿಗೆ ಅನ್ನವನ್ನೂ ನೀಡದೆ ದೇವರಿಗೆ ನೈವೇಧ್ಯ ನೀಡಿ ಏನು ಫಲ? ಬಡವರಿಗೆ ಮನೆ ಕಟ್ಟಿಕೊಡದೆ ದೇವರಿಗೆ ಗುಡಿ ಕಟ್ಟಿ ಏನು ಫಲ? ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವವರಿಗೆ ಯಾವ ರಾಮನ ದಯೆಯೂ ಇರಲಾರದು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದವೂ ಇರಲಾರದು ಎಂದು ಸಿದ್ದರಾಮಯ್ಯನವರು ಟೀಕಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.