ನೂತನ ಸಚಿವ ಸಂಪುಟ ಆಯ್ಕೆಯ ಮಾನದಂಡದ ವಿಚಾರವಾಗಿ ಸಿಎಂ ಸಿದ್ದು ಹೇಳಿದ್ದೇನು?

ನೂತನ ಸರ್ಕಾರದಲ್ಲಿ 24 ಸಚಿವರು ಇಂದು ರಾಜಭವನದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.ಸಿದ್ದರಾಮಯ್ಯ ಸರ್ಕಾರದಲ್ಲಿನ ಈ ಸಚಿವ ಸಂಪುಟದಲ್ಲಿ ಪ್ರದೇಶವಾರು ಹಾಗೂ ಜಾತಿವಾರು ಪ್ರಾತಿನಿಧ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ.

Written by - Manjunath N | Last Updated : May 27, 2023, 03:48 PM IST
  • 'ನಾವು ಕೊಟ್ಟಿರುವ ಭರವಸೆ ಈಡೇರಿಸಬೇಕು. ಜನ ನಮಗೆ ಬೆಂಬಲ ನೀಡಿದ್ದಾರೆ.
  • ಗ್ಯಾರಂಟಿಗಳನ್ನ ಜನರಿಗೆ ತಲುಪಿಸುವ ಕೆಲಸ ಮಾಡ್ತೀವಿ.
  • ವಿಪಕ್ಷಗಳು ಜನತೆಗೆ ಕೊಟ್ಟ ಭರವಸೆ ಈಡೇರಿಸಿಲ್ಲ,ಆದರೆ ನಾವು ಎಲ್ಲ ಭರವಸೆ ಈಡೇಸುತ್ತೇವೆ
ನೂತನ ಸಚಿವ ಸಂಪುಟ ಆಯ್ಕೆಯ ಮಾನದಂಡದ ವಿಚಾರವಾಗಿ ಸಿಎಂ ಸಿದ್ದು ಹೇಳಿದ್ದೇನು? title=

ಬೆಂಗಳೂರು: ನೂತನ ಸರ್ಕಾರದಲ್ಲಿ 24 ಸಚಿವರು ಇಂದು ರಾಜಭವನದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದ್ದಾರೆ.ಸಿದ್ದರಾಮಯ್ಯ ಸರ್ಕಾರದಲ್ಲಿನ ಈ ಸಚಿವ ಸಂಪುಟದಲ್ಲಿ ಪ್ರದೇಶವಾರು ಹಾಗೂ ಜಾತಿವಾರು ಪ್ರಾತಿನಿಧ್ಯಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದೆ.

ಇದನ್ನೂ ಓದಿ: Karnataka Cabinet List: ʼಶೆಟ್ಟರ್ ಹಾಗೂ ಸವದಿಗೆ ಅವಕಾಶ ಮಾಡಿಕೊಡೋದು ಪಕ್ಷಕ್ಕೆ ಒಳ್ಳೆದುʼ

ಈಗ ಪೂರ್ಣ ಪ್ರಮಾಣದ ಸಚಿವ ಸಂಪುಟದ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಎಲ್ಲ ಸಚಿವರಿಗೆ ಶುಭಕೋರಿದ್ದಾರೆ."ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಪುಟ ಸಹೋದ್ಯೋಗಿಗಳಿಗೆ ಹೃದಯಪೂರ್ವಕ ಅಭಿನಂದನೆಗಳು.ಒಂದು ಸರ್ಕಾರವಾಗಿ ನಾವೆಲ್ಲರೂ ಜನರ ಸಮಸ್ಯೆಗಳಿಗೆ ಅಂತಃಕರಣದಿಂದ ಸ್ಪಂದಿಸುವ ಮೂಲಕ ನಮ್ಮ ಮೇಲಿನ ನಂಬಿಕೆ ಮತ್ತು ನಿರೀಕ್ಷೆಯನ್ನು ಉಳಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡೋಣ.ನಿಮ್ಮ ಎಲ್ಲಾ ಜನಪರ,ಸಂವಿಧಾನಬದ್ಧ ಕಾರ್ಯಗಳಿಗೆ ನನ್ನ ಪೂರ್ಣ ಸಹಕಾರ ಇದೆ" ಎಂದು ಅವರು ಹೇಳಿದ್ದಾರೆ.

ಇನ್ನೂ ಖಾತೆ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು 'ಖಾತೆ ಹಂಚಿಕೆ ಇವತ್ತು ಅಥವಾ ನಾಳೆ ಖಾತೆ ಹಂಚಿಕೆ ಮಾಡ್ತೀವಿ.ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿದ್ದೇವೆ.ಸಿಎಂ ಬಿಟ್ಟು 33 ಮಂದಿ ಸಂಪುಟ ದರ್ಜೆ ಸಚಿವರನ್ನಾಗಿ ಮಾಡಿದ್ದೇವೆ.ಮೊದಲ ಬಾರಿ ಗೆದ್ದವರಿಗೆ ಮಂತ್ರಿ ಮಾಡಿಲ್ಲ, ಮೂರು ಬಾರಿ, ನಾಲ್ಕನೆಯ ಬಾರಿ ಗೆದ್ದವರನ್ನ ಸಚಿವರನ್ನಾಗಿ ಮಾಡಿದ್ದೇವೆ. ಹೊಸ ಮುಖ, ಹಿರಿಯರು ಎಲ್ಲರನ್ನೂ ಸೇರಿಸಿ ಸಚಿವ ಸಂಪುಟ ಮಾಡಿದ್ದೇವೆ' ಎಂದು ಅವರು ಹೇಳಿದರು.

ಇದನ್ನೂ ಓದಿ: ಸಿದ್ದು ಸಂಪುಟ ಖಾತೆ ಹಂಚಿಕೆ : ಗೃಹ ಸಚಿವರು ಯಾರು..! ಡಿಕೆಶಿಗೆ ಯಾವ ಖಾತೆ..?

ಇನ್ನೂ ಪಕ್ಷ ನೀಡಿರುವ ಭರವಸೆಗಳ ಕುರಿತಾಗಿ ಮಾತನಾಡುತ್ತಾ 'ನಾವು ಕೊಟ್ಟಿರುವ ಭರವಸೆ ಈಡೇರಿಸಬೇಕು. ಜನ ನಮಗೆ ಬೆಂಬಲ ನೀಡಿದ್ದಾರೆ.ಗ್ಯಾರಂಟಿಗಳನ್ನ ಜನರಿಗೆ ತಲುಪಿಸುವ ಕೆಲಸ ಮಾಡ್ತೀವಿ.ವಿಪಕ್ಷಗಳು ಜನತೆಗೆ ಕೊಟ್ಟ ಭರವಸೆ ಈಡೇರಿಸಿಲ್ಲ,ಆದರೆ ನಾವು ಎಲ್ಲ ಭರವಸೆ ಈಡೇಸುತ್ತೇವೆ. ಇದಕ್ಕೆ ಸಂಬಂಧಿಸಿದ ಎಲ್ಲ ಅಂಕಿ ಅಂಶ ಪಡೆದು ಮುಂದಿನ ಕ್ಯಾಬಿನೆಟ್ ನಲ್ಲಿ ಐದು ಭರವಸೆ ಈಡೇರಿಸುತ್ತೇವೆ ಎಂದು ಹೇಳಿದರು.

ಸಚಿವ ಸಂಪುಟದ ಆಯ್ಕೆ ಮಾನದಂಡದ ಕುರಿತಾಗಿ ಮಾತನಾಡಿದ ಅವರು 'ಕೆಲವು ಮಾನದಂಡದ ಮೇಲೆ ಸಂಪುಟ ರಚಿಸಿದ್ದೇವೆ.ಕೊಡಗು ಕೊಟ್ಟಿಲ್ಲ,ಹಾಸನಕ್ಕೆ ಕೊಟ್ಟಿಲ್ಲ,ಚಿಕ್ಕಮಗಳೂರಿಗೆ ಕೊಟ್ಟಿಲ್ಲ,ಹಾಸನಕ್ಕೆ  ಕೊಟ್ಟಿಲ್ಲ,ಹಾವೇರಿಗೆ ಕೊಟ್ಟಿಲ್ಲ,ಹೊಸಬರಿಗೆ ಕೊಟ್ಟಿಲ್ಲ.ಸಮಾಧಾನ, ಅಸಮಧಾನ ಯಾವತ್ತೂ ಇರೊದೆ, ಅಸಮಧಾನದ ಜೊತೆ ಸಮಾಧಾನ ಇದೆ ಹಾಗಾಗಿ ಎಲ್ಲರು ಒಪ್ಪಿಕೊಂಡಿದ್ದಾರೆ" ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News