ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ : ಸಿಎಂ

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. 

Written by - Prashobh Devanahalli | Edited by - Krishna N K | Last Updated : Aug 29, 2024, 03:40 PM IST
    • ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದೆ
    • ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ
    • ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ.
ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ : ಸಿಎಂ title=

ಬೆಂಗಳೂರು : ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು  ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಡಿವಿಸಿಬಲ್ ಪೂಲ್‌ಗೆ ಸೆಸ್ ಮತ್ತು ಸರ್ಜಾಜ್‌ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್‌ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು.

ಇದನ್ನೂ ಓದಿ:  ಮಂಡ್ಯ ನಗರಸಭೆಯಲ್ಲಿ ಒಂದೇ ಒಂದು ಮತದ ಅಂತರದಿಂದ ಗೆದ್ದ ಜೆಡಿಎಸ್!

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು.  ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ  ರಾಜ್ಯಕ್ಕೆ 4.713  ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

ಗುಜರಾತಿನ ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿಯವರು ತೆರಿಗೆ ಹಂಚಿಕೆಯಲ್ಲಿ ಶೇ. 50 ರಷ್ಟು ಪಾಲಿಗೆ ಬೇಡಿಕೆಯಿಟ್ಟಿದ್ದರು. ಅನೇಕ ರಾಜ್ಯಗಳು ಈ ರೀತಿ ಬೇಡಿಕೆ ಸಲ್ಲಿಸಿರುವುದರಿಂದ, ಕರ್ನಾಟಕದ ಬೇಡಿಕೆಯನ್ನು ಈಡೇರಿಸಬಹುದೆಂಬ ವಿಶ್ವಾಸವಿದೆ ಎಂದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News