ಬೆಳಗಾವಿ : ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. 


COMMERCIAL BREAK
SCROLL TO CONTINUE READING

ನಗರದ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಉಚ್ಚ ನ್ಯಾಯಾಲಯ ಅವರಿಗೆ ಛೀಮಾರಿ ಹಾಕಿದೆ. ಅವರಿಗೆ ಬೆಂಗಳೂರಿನ ಬಗ್ಗೆ  ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.  


ಇದನ್ನೂ ಓದಿ: ʼಅರ್ಜುನʼನ ಸಾವಿನ ಸುತ್ತ ಹಲವು ಪ್ರಶ್ನೆಗಳು..! ರಾಜರು, ಸಿಎಂ, ಡಿಸಿಎಂ ಎಲ್ಲಿ ಎಂದ ನೆಟ್ಟಿಗರು


ಉತ್ತರ ಕರ್ನಾಟಕದಲ್ಲಿ ಸದನ ನಡೆಯುತ್ತಿದ್ದು ಸಚಿವರು ತೆಲಂಗಾಣದಲ್ಲಿದ್ದಾರೆ ಎಂಬ ಹೇಳಿಕೆಗೆ ಉತ್ತರಿಸಿ ಎಲ್ಲರೂ ಅಲ್ಲಿಲ್ಲ, ಒಂದಿಬ್ಬರು ಹೋಗಿದ್ದಾರೆ ರಾಜಕೀಯವನ್ನೂ ಮಾಡಬೇಕಲ್ಲ. ಜಮೀರ್ ಅಹ್ಮದ್ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರು ಬರಬೇಕಷ್ಟೇ ಎಂದರು. ಬಹುತೇಕ ಜನ ವಾಪಸ್ಸು ಬಂದಿದ್ದಾರೆ ಎಂದರು.


ಅಭಿವೃದ್ಧಿ ಭಾಷಣವಿಲ್ಲ ಸಿದ್ದರಾಮಯ್ಯ ಕೇವಲ ಓಲೈಕೆ ಭಾಷಣ ಮಾಡುತ್ತಾರೆ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅದೆಲ್ಲಾ ನಿಮ್ಮಿಂದಲೇ ಆಗಿದೆ. ಎಲ್ಲಾ ಸಮುದಾಯಗಳು ಒಳಗೊಂಡಂತೆ ಮುಸ್ಲಿಮರನ್ನು ರಕ್ಷಣೆ ಮಾಡಲಾಗುವುದು ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.