ಉಡುಪಿ : ಬೆಲೆ ಏರಿಕೆಯಿಂದ ಕಷ್ಟದಲ್ಲಿರುವ ಜನರಿಗೆ ಆರ್ಥಿಕ ಬಲ ನೀಡಲು ಗ್ಯಾರಂಟಿಗಳನ್ನು ನೀಡುವ ಮೂಲಕ ಬಡವರ ಪರ ಕೆಲಸ  ಮಾಡುವುದು ಕಾಂಗ್ರೆಸ್ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಉಡುಪಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾಮಾಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದರು.


COMMERCIAL BREAK
SCROLL TO CONTINUE READING

ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ : 
ಬಿಜೆಪಿಯವರು ಗ್ಯಾರಂಟಿಗಳ ಬಗ್ಗೆ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ.  ಗ್ಯಾರಂಟಿಗಳು ಎಲ್ಲರಿಗೂ ತಲುಪಬೇಕೆಂಬ ಉದ್ದೇಶದಿಂದ ಅನುಷ್ಠಾನ ಸಮಿತಿಗಳನ್ನು ರಚಿಸಿದ್ದೇವೆ. ಗ್ಯಾರಂಟಿಗಳಿಂದಾಗಿ ಅಭಿವೃದ್ಧಿಗೆ ದುಡ್ಡು ಇರಿಸಲು ಸಾಧ್ಯವಿಲ್ಲ ಎಂಬ ಟೀಕೆ ಬಂದಿತು. ಪ್ರಧಾನಿಯವರು ಗ್ಯಾರಂಟಿಗಳಿಂದ ರಾಜ್ಯದಲ್ಲಿ ಆರ್ಥಿಕ ದಿವಾಳಿಯಾಗುತ್ತದೆ ಎಂದು ನುಡಿದಿದ್ದರು.ಆದರೆ ಈ ವರ್ಷ  36 ಸಾವಿರ ಹಾಗೂ ಮುಂದಿ ವರ್ಷ 52009 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗೆ ಈ ಬಜೆಟ್ ನಲ್ಲಿ ನಿಗದಿಪಡಿಸಿದ್ದರೂ, ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲಾಗುತ್ತಿದೆ ಎದ್ನು ಹೇಳಿದ್ದಾರೆ.


ಇದನ್ನೂ ಓದಿ : ಕ್ಯಾನ್ಸರ್ ಪೀಡಿತ ಬಾಲಕ ಐಪಿಎಸ್ ಕನಸು ಈಡೇರಿಸಿದ ಡಿಸಿಪಿ ಸೈದುಲು ಅಡಾವತ್


ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ : 
ರಾಜ್ಯದಿಂದ 4.30 ಲಕ್ಷ ಕೋಟಿ ರೂಗಳನ್ನು ತೆರಿಗೆ ರೂಪದಲ್ಲಿ ನೀಡಿದರೆ, ರಾಜ್ಯಕ್ಕೆ ಮರಳಿ ಬರುವುದು ಕೇವಲ 50,257 ಕೋಟಿ ಮಾತ್ರ. ಮೋದಿಯವರ ಕಾಲದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದ್ದು, ಇಲ್ಲಿನ ಸಂಸದೆ ಶೋಭಾ ಕರಂದ್ಲಾಜೆಯವರು ಈ ಬಗ್ಗೆ ಎಂದೂ ಕೇಂದ್ರವನ್ನು ಪ್ರಶ್ನಿಸಿಯೇ ಇಲ್ಲ.ಇಂಥಹ ಸಂಸದರನ್ನು ರಾಜ್ಯದ ಜನ ಆಯ್ಕ ಮಾಡಬೇಕೆ ? ಅಚ್ಛೇ ದಿನ್ ಆಯೆಂಗೆ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದ ಪ್ರಧಾನಿ ಮೋದಿಯವರು ಕೇಂದ್ರದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಆದರೆ ನಮ್ಮ ಕಾಂಗ್ರೆಸ್ ಸರ್ಕಾರ ನೀಡಿದ ಭರವಸೆಗಳನ್ನು ಈಡೇರಿಸಿದೆ ಎಂದು ಹೇಳಿದ್ದಾರೆ. 


ಕರ್ನಾಟಕದಲ್ಲಿ ಗೋ ಬ್ಯಾಕ್ ಬಿಜೆಪಿಗೆ ಸಿಎಂ ಕರೆ : 
ನರೇಂದ್ರ ಮೋದಿಯವರು ದೇಶದ ಎಲ್ಲಾ ಜನರ ಖಾತೆಗೆ ಹಣ ಹಾಕುವುದಾಗಿ ಹಾಗೂ ಉದ್ಯೋಗ ನೀಡುವುದಾಗಿ ಸುಳ್ಳು ಹೇಳಿದ್ದಾರೆ. ಮೋದಿಯವರು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟಿಸಿದರೆ, ರಾಜ್ಯದಲ್ಲಿ ನಾನು ಆಂಜನೇಯ ದೇಗುಲವನ್ನು ಉದ್ಘಾಟಿಸಿದೆ.ಇಲ್ಲಿನ  ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ ಅನುದಾನವನ್ನು ಮೀಸಲಿಟ್ಟಿದ್ದೇನೆ. ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಜನರ ದಾರಿ ತಪ್ಪಿಸುತ್ತಿದ್ದಾರೆ.ಈ ಬಾರಿ ಜನರು ರಾಜ್ಯದಲ್ಲಿ ಬಿಜೆಪಿ ಗೋಬ್ಯಾಕ್ ಎನ್ನಬೇಕು ಎಂದು  ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. 


ಇದನ್ನೂ ಓದಿ : ಕೋಮುಭಾವನೆ ಕೆರಳಿಸಲು ಕಾಂಗ್ರೆಸ್ಸಿಗರಿಂದ ಸಿಎಎ ಬಳಕೆ, ಮಾನವೀಯತೆ ಇಲ್ಲದ ಕಾಂಗ್ರೆಸ್‌: ಆರ್‌.ಅಶೋಕ


ಕರಾವಳಿ ಪ್ರದೇಶದ ಅಭಿವೃದ್ಧಿಗೆ ಬದ್ಧ : 
ಬಸವಣ್ಣನವರ ತತ್ವಗಳನ್ನಾಧರಿಸಿ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ನಾವು ಘೋಷಿಸಿದ್ದೇವೆ. ಮೀನುಗಾರಿಕೆ ಇಲಾಖೆಗೆ 3 ಸಾವಿರ ಕೋಟಿ ರೂ. ಬಜೆಟ್ ನಲ್ಲಿ ಇಡಲಾಗಿದೆ.  ಮೀನುಗಾರರಿಗೆ 10 ಸಾವಿರ ಮನೆಗಳನ್ನು ನೀಡಲಾಗುತ್ತಿದೆ. ಕರಾವಳಿ ಪ್ರದೇಶದ ಅಭಿವೃದ್ಧಿಗೊಳಿಸಲಾಗುವುದು ಎಂದು ಹೇಳಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.