ಬೆಂಗಳೂರು: ಮಹಾರಾಷ್ಟ್ರ ಮಾದರಿಯಲ್ಲಿಯೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಉರುಳಿಸಲು ಸಿದ್ಧತೆ ನಡೆದಿದೆ ಎಂಬುದರ ಬಗ್ಗೆ ಸಿಎಂ ಏಕನಾಥ ಶಿಂದೆ ಸುಳಿವು ನೀಡಿದ್ದಾರೆ. ಇದೇ ವಿಚಾರವಾಗಿ ಸೋಮವಾರ ಪ್ರತಿಕ್ರಿಯಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಯಾವುದೇ ಕಾರಣಕ್ಕೂ ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಆಪರೇಷನ್ ಮಾಡಲು ಸಾಧ್ಯವಿಲ್ಲ. ಬಿಜೆಪಿಯವರು ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಈ ಹಿಂದೆ ಆಪರೇಷನ್ ಮಾಡಲು ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗಲೂ ಪ್ರಯತ್ನ ಮಾಡುತ್ತಲೇ ಇದ್ದಾರೆ. ಆದರೆ ಇದು ಯಾವುದೇ ಕಾರಣಕ್ಕೂ ಸಾಧ್ಯವಿಲ್ಲವೆಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. 


ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣ ಬಗ್ಗೆ ಚರ್ಚೆ ವಿಚಾರ


ಸರ್ಕಾರ ಬೀಳಿಸುತ್ತೇವೆ ಅನ್ನೋದು ಬಿಜೆಪಿಯರ ಭ್ರಮೆ. ʼಆಪರೇಷನ್ ಕಮಲʼ ಸಾಧ್ಯವೇ ಇಲ್ಲ. ಅವರು ಲೋಕಸಭಾ ಚುನಾವಣೆಯಲ್ಲಿ ಸೋಲ್ತಾ ಇದ್ದಾರೆ. ಕೇಂದ್ರದಲ್ಲಿ NDA ಸೋಲ್ತಾ ಇದೆ. ನಮ್ಮ ಸರ್ಕಾರವನ್ನು ಬೀಳಿಸಲು ಅವರು ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಕಳೆದೊಂದು ವರ್ಷದಿಂದ ಪ್ರಯತ್ನ ಮಾಡಿ ವಿಫಲ ಆಗಿದ್ದಾರೆ. ಆದರೂ ಆಪರೇಷನ್‌ ಮಾಡುತ್ತಲೇ ಇದ್ದಾರೆ. ಈ ರೀತಿಯ ಪ್ರಯತ್ನ ಯಶಸ್ವಿಯಾಗಲ್ಲ. ಅವರ ಪ್ರಯತ್ನ ಸಫಲ ಆಗಲ್ಲ ಅಂತಾ ಸಿದ್ದರಾಮಯ್ಯ ಕುಟುಕಿದ್ದಾರೆ. 


ಲೋಕಸಭಾ ಚುನಾವಣೆಯಲ್ಲಿ ನಾವು 20 ಸ್ಥಾನಗಳನ್ನು ಗೆಲ್ಲುತ್ತೇವೆ. ಬಿಜೆಪಿಯವರು ಲೋಕಸಭಾ ಚುನಾವಣೆಯಲ್ಲಿ ಸೋಲುತ್ತಾರೆ. ಹೀಗಾಗಿಯೇ ಅವರು ಹತಾಶರಾಗಿ ಸರ್ಕಾರ ಬೀಳಿಸುವ ಹೇಳಿಕೆ ಕೊಡುತ್ತಿದ್ದಾರೆ ಅಂತಾ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.  


ಇದನ್ನೂ ಓದಿ“ಎಲ್ಲೆಡೆ ಮಳೆಯಾಗಿ ಆಸ್ತಿ ನಾಶವಾಗುತ್ತಿದೆ; ಮಂತ್ರಿಗಳು ಎಲ್ಲೂ ಕಾಣಿಸುತ್ತಿಲ್ಲ”


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.