ಮೈಸೂರಿಗೆ ಬರುತ್ತಿರುವ ಪ್ರಧಾನಿ ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ: ಸಿದ್ದರಾಮಯ್ಯ

Lok Sabha Elections 2024: ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ. ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

Written by - Puttaraj K Alur | Last Updated : Apr 13, 2024, 05:37 PM IST
  • ಮೈಸೂರಿಗೆ ಬರುತ್ತಿರುವ ಪ್ರಧಾನಿ ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ
  • ಮೋದಿಯವರಾಗಲೀ, ಇವರ ಸಂಸದರಾಗಲೀ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ
  • ಮೋದಿ ಯಾವ ಮುಖ ಹೊತ್ಕೊಂಡು ರಾಜ್ಯಕ್ಕೆ ಬರ್ತಾರೆ? ಯಾವ ಮುಖ ಹೊತ್ತಕೊಂಡು ಮತ ಕೇಳುತ್ತಾರೆ?
ಮೈಸೂರಿಗೆ ಬರುತ್ತಿರುವ ಪ್ರಧಾನಿ ಮೋದಿ ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ: ಸಿದ್ದರಾಮಯ್ಯ title=
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

Lok Sabha Elections 2024: ಮೈಸೂರಿಗೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕೃಷ್ಣರಾಜ  ಕ್ಷೇತ್ರದಲ್ಲಿ ನಡೆದ ʼಜನಧ್ವನಿ-2ʼ ಯಾತ್ರೆಯ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ʼಮೈಸೂರಿನಲ್ಲಿ ಜಯದೇವ ಆಸ್ಪತ್ರೆ ಮಾಡಿದವರು ಯಾರು? ಮಹಿಳೆಯರು-ಮಕ್ಕಳ ಆಸ್ಪತ್ರೆ ಮಾಡಿದವರು ಯಾರು? ಶಾಲೆ-ಹಾಸ್ಟೆಲ್‌ಗಳನ್ನು ಮಾಡಿದವರು ಯಾರು? ಮೈಸೂರಿನ ಅಭಿವೃದ್ಧಿಗೆ ಸಾವಿರಾರು ಕೋಟಿ ಹಣ ಕೊಟ್ಟ ಸರ್ಕಾರ ಯಾವುದು? ಎನ್ನುವುದು ಮೈಸೂರಿನ ಪ್ರತಿ ಪ್ರಜ್ಞಾವಂತರಿಗೂ ಗೊತ್ತು. ನಾವು ಮಾಡಿದಷ್ಟು ಕೆಲಸವನ್ನು ಮಾಡಲು ಬಿಜೆಪಿಗೂ ಅವಕಾಶ ಇತ್ತು. ಜನ ಅವಕಾಶ ಕೊಟ್ಟಿದ್ದರು. ಆದರೆ ಈ ಅವಕಾಶ ಸಿಕ್ಕಾಗ ಬಿಜೆಪಿ ಸಂಸದರು ಕೆಲಸ ಮಾಡಲಿಲ್ಲ. ಹೀಗಾಗಿ ನುಡಿದಂತೆ ನಡೆದು ಅಭಿವೃದ್ಧಿಯ ದಿಕ್ಕಲ್ಲಿ ಮುನ್ನುಗ್ಗುತ್ತಿರುವ ನಮಗೆ ಅವಕಾಶ ಕೊಡಿ. ಸಾಮಾನ್ಯ ಕಾರ್ಯಕರ್ತರಾಗಿ ಹೋರಾಟ, ಪ್ರತಿಭಟನೆಗಳಿಂದ ಬೆಳೆದ ಎಂ.ಲಕ್ಷ್ಮಣ್ ಅವರನ್ನು ಈ ಬಾರಿ ಗೆಲ್ಲಿಸಿ ಎಂದು ಮನವಿ ಮಾಡುತ್ತೇನೆʼ ಎಂದು ಹೇಳಿದರು.

ಇದನ್ನೂ ಓದಿ: ಹಾಸನದಲ್ಲಿ ಬಿಜೆಪಿ ಮುಖಂಡನ ಮೇಲೆ ಹಲ್ಲೇ ಪ್ರಕರಣ

ಬಿಜೆಪಿಗೆ ಮೈಸೂರು-ಕೊಡಗಿನ ಜನತೆ ಅವಕಾಶ ಕೊಟ್ಟಾಗ ಬಿಜೆಪಿ ಸಂಸದರು, ಶಾಸಕರು, ಮುಖ್ಯಮಂತ್ರಿಗಳು, ಪ್ರಧಾನಮಂತ್ರಿಗಳು ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಲಿಲ್ಲ. ಈಗ ಕೇವಲ ಅಭ್ಯರ್ಥಿಯನ್ನು ಬದಲಾಯಿಸಿ ಮತ ಕೇಳುತ್ತಿದ್ದಾರೆ. ಇದು ಹೊಣೆಗೇಡಿತನ ಅಲ್ಲವೇ? ಪ್ರಧಾನಿ ಮೋದಿಯವರು ಬಡವರ, ದುಡಿಯವ ವರ್ಗಗಳ, ಮಹಿಳೆಯರ ಪರವಾಗಿ ಮಾಡಿದ ಒಂದೇ ಒಂದು ಕೆಲಸ ಯಾರಿಗಾದರೂ ಗೊತ್ತಾ? ಕೇವಲ ಸುಳ್ಳುಗಳನ್ನು ಸೃಷ್ಟಿಸಿ, ಭಾವನಾತ್ಮಕವಾಗಿ ಕೆರಳಿಸುವವರಿಗೆ ಮತ ಹಾಕಿದರೆ ನೀವು ಮೋಸಹೋದಂತೆ ಅಲ್ಲವೇ?ʼ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ನಾಳೆ(ಭಾನುವಾರ) ಮೈಸೂರಿಗೆ ಬರುತ್ತಿರುವ ಪ್ರಧಾನಿ ಮೋದಿಯವರು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಾರೆ. ಮೋದಿಯವರಾಗಲೀ, ಇವರ ಸಂಸದರಾಗಲೀ ಮೈಸೂರಿಗೆ ಏನು ಕೆಲಸ ಮಾಡಿದ್ದಾರೆ ತೋರಿಸಲಿ. ಬರೀ ಸುಳ್ಳುಗಳ ಸವಾರಿ ಮಾಡಿಕೊಂಡು 10 ವರ್ಷ ಮುಗಿಸಿದ್ರು, ಹೀಗಿದ್ದಾಗ ಮೋದಿಯವರು ಯಾವ ಮುಖ ಹೊತ್ಕೊಂಡು ರಾಜ್ಯಕ್ಕೆ ಬರ್ತಾರೆ? ಯಾವ ಮುಖ ಹೊತ್ತಕೊಂಡು ಮತ ಕೇಳುತ್ತಾರೆ?ʼ ಅಂತಾ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ್ರೆ ಎಲ್ಲ ಫಿನಿಷ್‌ ಆಗುತ್ತೆ ಯಾಕೆ?

ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಕಾಂಗ್ರೆಸ್. ಬಡತನ ನಿರ್ಮೂಲನೆಗೆ ಇಂದಿರಾಗಾಂಧಿಯವರು 20 ಅಂಶಗಳ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡಿದರು. ಕೇವಲ ಶ್ರೀಮಂತರಿಗಾಗಿ ಕೆಲಸ ಮಾಡಿದ ಪ್ರಧಾನಿ ಮೋದಿ, ಬಡವರಿಗಾಗಿ, ಬಡತನ ಹೋಗಲಾಡಿಸಲು ಒಂದಂಶದ ಕಾರ್ಯಕ್ರಮವನ್ನೂ ಏಕೆ ಕೊಡಲಿಲ್ಲ?ʼ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News