ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ..ರಾಜ್ಯದಲ್ಲಿ 24,300 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಒಪ್ಪಿಗೆ..!

CM unemployed good news: ರಾಜ್ಯದ ಯುವ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಕೊಟ್ಟಿದ್ದಾರೆ.. ರಾಜ್ಯದಲ್ಲಿ 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ ಎಂದು ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.

Written by - Ramya R Gowda | Last Updated : Dec 10, 2025, 03:39 PM IST
  • ರಾಜ್ಯದ ನಿರುದ್ಯೋಗಿ ಯುವಜನತೆಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್
  • 24,300 ಹುದ್ದೆಗಳನ್ನು ಭರ್ತಿ ಮಾಡಲು ಹಣಕಾಸು ಇಲಾಖೆ ಒಪ್ಪಿಗೆ
ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ..ರಾಜ್ಯದಲ್ಲಿ 24,300 ಹುದ್ದೆ ಭರ್ತಿಗೆ ಹಣಕಾಸು ಇಲಾಖೆ ಒಪ್ಪಿಗೆ..!

CM unemployed good news: ರಾಜ್ಯದ ಯುವ ನಿರುದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಕೊಟ್ಟಿದ್ದಾರೆ.. ರಾಜ್ಯದಲ್ಲಿ 24,300 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ ಎಂದು ಸಿದ್ದರಾಮಯ್ಯ ಎಂದು ಹೇಳುವ ಮೂಲಕ ಕರ್ನಾಟಕ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ.. 

ಯುವ ಜನತೆ ನಿರುದ್ಯೋಗದಿಂದ ಖಾಯಂ ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ. ಯಾವುದಾರೊಂದು ಉದ್ಯೋಗ ಸಿಕ್ಕಿದ್ದರೆ ಸಾಕಪ್ಪ ಅನುಷ್ಟರಮಟ್ಟಿಗೆ ತಲುಪಿದೆ..ಹೀಗಿರುವಾಗ ಇಂದು ಸಿದ್ದರಾಮಯ್ಯ ಮಹತ್ವದ ತೀರ್ಮಾನ ಒಂದು ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ 24,300 ಹುದ್ದೆಗಳು ಖಾಲಿ ಇದ್ದು ಆ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಹಣಕಾಸು ಇಲಾಖೆಯು ಒಪ್ಪಿಗೆ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇಷ್ಟು ದಿನ ಕೆಲಸವಿಲ್ಲವೆಂದು ಕಂಗೆಟ್ಟಿದ್ದ ಯುವ ಜನತೆಗೆ ಸಿದ್ದರಾಮಯ್ಯ ಅವರ ಮಹತ್ವದ ತೀರ್ಮಾನವನ್ನ ಕೇಳಿ ಮರುಭೂಮಿಯಲ್ಲಿ ನೀರು ಸಿಕ್ಕಾಂತಾಗಿದೆ.. 
 
ಬಿಜೆಪಿ ಉಚ್ಚಾಟಿತ ಸದಸ್ಯ ಬಸವನಗೌಡ ಪಾಟೀಲ್‌ ಯತ್ನಾಳ್‌ರಾಜ್ಯದಲ್ಲಿ ಸರ್ಕಾರಿ ಮತ್ತ ಅರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ಪ್ರಶ್ನಿಸಿದರು..ಬಸವನಗೌಡ ಪಾಟೀಲ್‌ ಯತ್ನಾಳ್‌ಗೆ ಸಿದ್ದರಾಮಯ್ಯ ಉತ್ತರಿಸಿ ಲಿಖಿತ ರೂಪದಲ್ಲೇ ಉತ್ತರಿಸಿದ್ದರು. ರಾಜ್ಯದ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳ ಪೈಕಿ 24,300 ಹುದ್ದೆಗಳಿಗೆ ಹೊಸದಾಗಿ ನೇಮಕಾತಿ ಮಾಡಿಕೊಳ್ಳಲು ರಾಜ್ಯದ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಹಣಕಾಸು ಇಲಾಖೆಯಿಂದ ಅನುಮೋದಿತವಾದ ಹುದ್ದೆಗಳನ್ನು ಕಾಲ ಕಾಲಕ್ಕೆ ಭರ್ತಿ ಮಾಡಲು ನಿಯಮದ ಅನುಸಾರ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:  ಮನೆಗೆ ವಿಡಿಯೋ ಕಾಲ್ ಮಾಡಿ ಚೆನ್ನಾಗಿದ್ದೇನೆ, ನಾಳೆ ಆಸ್ಪತ್ರೆಗೆ ಹೋಗ್ತೀನಿ ಎಂದಿದ್ದ ಯೋಧ ಹುತಾತ್ಮ

About the Author

Ramya R Gowda

ರಮ್ಯಾ ಆರ್‌ ಗೌಡ 2022ರಿಂದ ಮಾಧ್ಯಮ ಲೋಕದಲ್ಲಿದ್ದು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿ ಡೆಸ್ಕ್'ನಲ್ಲಿಯೂ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. 2025ರಿಂದ ʼಜೀ ಕನ್ನಡ ನ್ಯೂಸ್‌' ವೆಬ್ ವಿಭಾಗದಲ್ಲಿ ಸಬ್ ಎಡಿಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಇವರು ಇತ್ತೀಚಿನ ಸುದ್ದಿಗಳ ಜೊತೆಗೆ ಮನರಂಜನೆ, ಕ್ರೀಡೆ, ವೈರಲ್‌, ಲೈಫ್‌ಸ್ಟೈಲ್‌ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾರೆ.

...Read More

Trending News