ಬೆಂಗಳೂರು : ಕಾಂಗ್ರೆಸ್ ಸರ್ಕಾರವು ಕಾಸಿಗಾಗಿ ಪೋಸ್ಟಿಂಗ್ ದಂಧೆಯಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ಪತ್ರಗಳನ್ನು ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.


COMMERCIAL BREAK
SCROLL TO CONTINUE READING

ಪಂಚಗ್ಯಾರಂಟಿಗಳ ರಾಜ್ಯ ಕಾಂಗ್ರೆಸ್ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್!!ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದಿರುವ ಅವರು ಕಾಸಿಗಾಗಿ ಪೋಸ್ಟಿಂಗ್ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.


ಇದನ್ನೂ ಓದಿ: ಗೃಹಜ್ಯೋತಿ ಯೋಜನೆಗೆ ಹೆಚ್ಚು ಹಣ ವಸೂಲಿ ಮಾಡಿದರೆ ಕಠಿಣ ಕ್ರಮ


ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ!! ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CM of Karnataka ವೋ ಅಥವಾ Corruption of Karnataka ವೋ?? ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನೆ ಮಾಡಿದ್ದಾರೆ.


ಜು. 1ರಿಂದ ಪಡಿತರರಿಗೆ ಅಕ್ಕಿ ಬದಲು ಹಣ : ತಿಂಗಳಿಗೆ ₹170 ನೀಡಲು ಸರ್ಕಾರ ತೀರ್ಮಾನ


ಈ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರ್ಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಅವರು ದೂರಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.