/kannada/photo-gallery/money-will-rain-into-these-zodiac-sign-as-shukra-dese-232387  ಶುಕ್ರದೆಸೆಯೊಂದಿಗೆ ನನಸಾಗುವುದು ಈ ರಾಶಿಯವರ ಸ್ವಂತ ಮನೆ ಕನಸು !ಹರಿದು ಬರುವುದು ಅಷ್ಟೈಶ್ವರ್ಯ!ಪ್ರಾಪ್ತಿಯಾಗುವುದು ಜೀವನದ ಸರ್ವ ಸುಖ ಶುಕ್ರದೆಸೆಯೊಂದಿಗೆ ನನಸಾಗುವುದು ಈ ರಾಶಿಯವರ ಸ್ವಂತ ಮನೆ ಕನಸು !ಹರಿದು ಬರುವುದು ಅಷ್ಟೈಶ್ವರ್ಯ!ಪ್ರಾಪ್ತಿಯಾಗುವುದು ಜೀವನದ ಸರ್ವ ಸುಖ 232387

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರಮುಖ ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕಿಡ್ನಿ ಸ್ಟೋನ್ ಮೂತ್ರದ ಮೂಲಕವೇ ಹೊರಹೋಗುವಂತೆ ಮಾಡುತ್ತೆ ಪೊದೆಗಳಲ್ಲಿ ಬೆಳೆಯುವ ಈ ಸೊಪ್ಪು!

ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇರ ಪಾತ್ರ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಾರದೆ 187 ಕೋಟಿ ರೂಪಾಯಿ ದೊಡ್ಡ ಮೊತ್ತ ವರ್ಗಾವಣೆ ಆಗಲು ಸಾಧ್ಯವೇ ಇಲ್ಲ ಎಂದು ಜೋಶಿ ಹೇಳಿದರು.

ಸಿಎಂಗೂ ನೀಡಲಿ ನೋಟಿಸ್:

ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಹಗರಣದಲ್ಲಿ ಸಿಎಂ ಅವರಿಗೂ SIT ನೋಟಿಸ್ ನೀಡಬೇಕು ಮತ್ತು ಅವರ ಪಾತ್ರದ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಪ್ರಲ್ಹಾದ ಜೋಶಿ ಒತ್ತಾಯಿಸಿದರು.

ಸಿಎಂ ನೇರ ಹೊಣೆ:

ಮೂಡಾ ಹಗರಣದಲ್ಲಿ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ. ಅವರ ಹಸ್ತಕ್ಷೇಪ, ಭಾಗಿ ಇಲ್ಲದೇ ಇರಲು ಸಾಧ್ಯವಿಲ್ಲ. ಹಾಗಾಗಿ ಇದರಲ್ಲಿ ಸಿಎಂ ವಿರುದ್ಧ ನೇರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಭಾರತದ ಆ ಕ್ರಿಕೆಟಿಗನಿಗಾಗಿ ಕಾವ್ಯ ಮಾರನ್ ಮತ್ತು ಪ್ರೀತಿ ಜಿಂಟಾ ನಡುವೆ ಫೈಟ್!? ಚೆಲುವೆಯರ ಮನಗೆದ್ದ ಆತ ಬೇರಾರು ಅಲ್ಲ…

ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ. ಅವರ ಭಾಗಿತ್ವ ಇಲ್ಲದೇ ಈ ಮಟ್ಟದ ಭ್ರಷ್ಟಾಚಾರ ಅಸಾಧ್ಯ. ಅವರಿಗೆ ಗೊತ್ತಿದ್ದೆ ವಂಚನೆ ನಡೆದಿದೆ. ಮೂಡಾ ಹಗರಣದಲ್ಲಿ ಸಿಎಂ ನೈತಿಕ ಹೊಣೆ ಹೊರಬೇಕು. ಈ ಎರಡೂ ಬಹು ದೊಡ್ಡ ಹಗರಣದಲ್ಲಿ ಸಿಎಂ ವಿರುದ್ಧ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Section: 
English Title: 
CMs role in Valmiki and Muda scam should be probed: Union Minister Pralhad Joshi
News Source: 
Home Title: 

ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ
Caption: 
File Photo
Yes
Is Blog?: 
No
Tags: 
Facebook Instant Article: 
Yes
Highlights: 
  • ವಾಲ್ಮೀಕಿ ಅಭಿವೃದ್ದಿ ನಿಗಮದ ಭ್ರಷ್ಟಾಚಾರ ಹಗರಣ
  • ಹಗರಣಗಳಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು
  • ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹ
Mobile Title: 
ವಾಲ್ಮೀಕಿ, ಮೂಡಾ ಹಗರಣದಲ್ಲಿ ಸಿಎಂ ಪಾತ್ರದ ಬಗ್ಗೆ ತನಿಖೆ ಆಗಲೇಬೇಕು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ
Prashobh Devanahalli
Publish Later: 
No
Publish At: 
Friday, July 12, 2024 - 20:54
Created By: 
Bhavishya Shetty
Updated By: 
Bhavishya Shetty
Published By: 
Bhavishya Shetty
Request Count: 
1
Is Breaking News: 
No
Word Count: 
218