ಬೆಂಗಳೂರು: #NEP2020ರ ಬದಲು ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ನಿಮ್ಮ ಮೊಮ್ಮಗ ಮಾತ್ರ ಇಂಟರ್‌ನ್ಯಾಷನಲ್‌ ಶಾಲೆಯಲ್ಲಿ ಓದಿದರೆ ಸಾಕೇ? ಸರ್ಕಾರಿ ಶಾಲೆಯಲ್ಲಿ ಓದುವ ನಮ್ಮ ಮಕ್ಕಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ಬೇಡವೇ? ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ‍ಪ್ರಶ್ನಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರವಾಗಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥ್ ನಾರಾಯಣ್, ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ‘ಕಾಂಗ್ರೆಸ್‌ ಸರ್ಕಾರದ ಅಧಿಕಾರದ ಅಮಲು ಕರ್ನಾಟಕದ ಶಿಕ್ಷಣ ವಲಯಕ್ಕೆ ವಿಷವಾಗಿ ಪರಿಣಮಿಸಿದೆ. #NEP2020 ಜಾರಿಗೆ ತರುವ ಸಂದರ್ಭದಲ್ಲಿ 2035ರೊಳಗೆ ದೇಶದಾದ್ಯಂತ ಪೂರ್ಣ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ. ಈ ಬಗ್ಗೆ ಆರಂಭದಿಂದಲೂ ಅಪಪ್ರಚಾರ ಮಾಡುತ್ತಾ ಬಂದಿರುವ ಕಾಂಗ್ರೆಸ್‌ನ ರಾಜಕೀಯ ಪ್ರೇರಿತ ನಡೆ ಖಂಡನೀಯ’ವೆಂದು ಕಿಡಿಕಾರಿದ್ದಾರೆ.


ಜಿ.ಟಿ.ದೇವೆಗೌಡರ ಅಧ್ಯಕ್ಷತೆಯಲ್ಲಿ ಜೆಡಿಎಸ್ ನೂತನ ಕೋರ್ ಕಮಿಟಿ ರಚನೆ


‘ಡಿಕೆಶಿ ಅವರೇ, ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮಕ್ಕಳು ಮಾತ್ರ CBSE, ICSE ಪಠ್ಯಕ್ರಮವನ್ನು ಓದಿದರೆ ಸಾಕೇ? ಸರ್ಕಾರಿ ಶಾಲೆಯಲ್ಲಿ ಓದುವ ನಮ್ಮ ಮಕ್ಕಳಿಗೆ ಅಂತಹ ಗುಣಮಟ್ಟದ ಶಿಕ್ಷಣ ದೊರಕಬಾರದೇ? ಜ್ಞಾನಾಧಾರಿತ ಸಮಾಜದಲ್ಲಿ ನಮ್ಮ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ, ಕೌಶಲ್ಯದಿಂದ ವಂಚಿತರಾಗಬಾರದು ಎಂಬುದು ನಮ್ಮ ಉದ್ದೇಶ. #NEP2020 ಕರಡು ಸಮಿತಿಯ ಅಧ್ಯಕ್ಷರಾಗಿದ್ದವರು ನಮ್ಮ ಕರ್ನಾಟಕದವರೇ ಆದ ISRO ಮಾಜಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್‌ ಅವರು. ಅಂಥವರ ದೂರದೃಷ್ಟಿಯ ಬಗ್ಗೆಯೂ ಕಾಂಗ್ರೆಸ್ಸಿಗರಿಗೆ ಸಂಶಯವೇ? ಅನೇಕ ಶಿಕ್ಷಣ ತಜ್ಞರ ಅಭಿಪ್ರಾಯ, ಸಲಹೆ ಸೂಚನೆಗಳನ್ನು ಕ್ರೋಢೀಕರಿಸಿ ಸಿದ್ಧಪಡಿಸಲಾಗಿರುವ #NEP2020 ವಿರುದ್ಧ ಅಪಪ್ರಚಾರ ಮಾಡುವುದು ಕ್ಷಮಾರ್ಹವಲ್ಲ’ವೆಂದು ಟೀಕಿಸಿದ್ದಾರೆ.


ನಮ್ಮ ಹೆಸರಲ್ಲಿ ನೈಸ್ ಆಸ್ತಿ ಇದ್ದರೆ ಇಡೀ ಕುಟುಂಬವೇ ರಾಜಕೀಯ ನಿವೃತ್ತಿ: ಎಚ್.ಡಿ.ಕುಮಾರಸ್ವಾಮಿ


ಅಶ್ವತ್ಥ್ ನಾರಾಯಣ್ ಟ್ವೀಟ್ ಮಾಡಿದ್ದಾರೆ.    


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.