ಯಶವಂತಪುರ-ಮಾರಮ್ಮ ಸರ್ಕಲ್ ವೈಟ್ ಟಾಪಿಂಗ್ ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವರ ಸೂಚನೆ

ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್‌ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗುತ್ತಿದೆ.

Written by - Prashobh Devanahalli | Edited by - Puttaraj K Alur | Last Updated : Oct 8, 2022, 12:59 PM IST
  • ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್‌ವರೆಗೆ ವೈಟ್ ಟಾಪಿಂಗ್ ಕಾಮಗಾರಿ
  • ನ.1ರೊಳಗೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಸೂಚನೆ
  • ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವ ಅಶ್ವತ್ಥ್ ನಾರಾಯಣ
ಯಶವಂತಪುರ-ಮಾರಮ್ಮ ಸರ್ಕಲ್ ವೈಟ್ ಟಾಪಿಂಗ್ ಕಾಮಗಾರಿ: ನ.1ರೊಳಗೆ ಮುಗಿಸಲು ಸಚಿವರ ಸೂಚನೆ title=
ನ.1ರೊಳಗೆ ಕಾಮಗಾರಿ ಮುಗಿಸಲು ಸೂಚನೆ

ಬೆಂಗಳೂರು: ಯಶವಂತಪುರ ವೃತ್ತದಿಂದ ಮಲ್ಲೇಶ್ವರಂನ ಮಾರಮ್ಮನ ಗುಡಿ ಸರ್ಕಲ್‌ವರೆಗೆ ನಡೆಯುತ್ತಿರುವ ವೈಟ್ ಟಾಪಿಂಗ್ ಕಾಮಗಾರಿ ಭರದಿಂದ ಸಾಗಿದ್ದು, ನ.1ರೊಳಗೆ ಮುಗಿಸಲು ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶನಿವಾರ ಬೆಳಿಗ್ಗೆ ಕಾಮಗಾರಿ ಪರಿಶೀಲನೆ ನಡೆಸಿದ ಅವರು, ‘ನಗರದ ಅತ್ಯಂತ ವಾಹನದ ದಟ್ಟಣೆಯ ರಸ್ತೆಗಳಲ್ಲಿ ಇದೂ ಒಂದಾಗಿದ್ದು, ಮಾರಮ್ಮ ಸರ್ಕಲ್‌ನಿಂದ ಯಶವಂತಪುರ ವೃತ್ತದವರೆಗೆ ಈಗಾಗಲೇ ಒಂದು ಬದಿಯ ವೈಟ್‌ ಟಾಪಿಂಗ್ ಕಾಮಗಾರಿ ಮುಗಿದು, ಸಾರ್ವಜನಿಕರು ಉಪಯೋಗಿಸುತ್ತಿದ್ದಾರೆ. ಈಗ ಇನ್ನೊಂದು ಬದಿಯಿಂದ ಈ ಕಾಮಗಾರಿ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಇದನ್ನೂ ಓದಿ: PFI ಜೊತೆ ಪೊಲೀಸರ ನಂಟು.? ರಾಜ್ಯದ‌ ಮೇಲೂ NIA ಕಣ್ಣು.!

ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 36, 37 ಮತ್ತು 41ರಲ್ಲಿ ಕುಡಿಯುವ ನೀರು ಪೂರೈಕೆಗೆ ಹೊಸದಾಗಿ 700 ಮಿಲಿ ಮೀಟರ್ ವ್ಯಾಪ್ತಿಯ ಕೊಳವೆಗಳನ್ನು ಹೊಸದಾಗಿ ಹಾಕಲಾಗುತ್ತಿದೆ. ಹಾಗೆಯೇ ಬಿಇಎಲ್‍ಗೆ ಸಂಪರ್ಕ ಕಲ್ಪಿಸುವ 300 ಮಿಲಿ ಮೀಟರ್ ವ್ಯಾಪ್ತಿಯ ಕೊಳವೆಗಳನ್ನು ಹಾಕಲಾಗುತ್ತಿದೆ. ಈ ಕಾಮಗಾರಿಗಳು ಕೂಡ ಕ್ಷಿಪ್ರಗತಿಯಲ್ಲಿ ಮುಗಿಯಲಿವೆ ಎಂದು ಸಚಿವರು ತಿಳಿಸಿದರು.

ಕಾಮಗಾರಿ ನಡೆಸುವಾಗ ಗುಣಮಟ್ಟದ ಪಾದಚಾರಿ ರಸ್ತೆಗಳನ್ನು ನಿರ್ಮಿಸಲು ಅಧಿಕಾರಿಗಳಿಗೆ ಅಶ್ವತ್ಥ್ ನಾರಾಯಣ ಸೂಚಿಸಿದರು. ಜೊತೆಗೆ ಹಿಂದಿನ ಪಾದಚಾರಿ ಮಾರ್ಗಗಳಲ್ಲಿದ್ದ ಕೊರಕಲು ಇತ್ಯಾದಿ ಲೋಪದೋಷಗಳನ್ನು ಸರಿಪಡಿಸಲು ನಿರ್ದೇಶಿಸಲಾಗಿದೆ. ಸುಗಮ ವಾಹನ ಸಂಚಾರದ ಜೊತೆಗೆ ಪಾದಚಾರಿಗಳ ಸುಲಭ ಓಡಾಟಕ್ಕೂ ಅನುಕೂಲಕರ ಫುಟ್‌ಪಾತ್‌ಗಳನ್ನು ಅಭಿವೃದ್ಧಿಪಡಿಸಲು ಸಚಿವರು ಇದೇ ವೇಳೆ ಸೂಚಿಸಿದರು.

ಇದನ್ನೂ ಓದಿ: ಬಿಜೆಪಿಗೆ ರೈತರ ಹಾಗೂ ಬಡವರ ಬಗ್ಗೆ ಕಾಳಜಿ ಇಲ್ಲ: ರಾಹುಲ್ ಗಾಂಧಿ

ಹೊಸ ಕೊಳವೆಗಳನ್ನು ಹಾಕುವಾಗ ಆ ಜಾಗಗಳನ್ನು ಭದ್ರವಾಗಿ ಮುಚ್ಚುವ ಕಡೆ ಗಮನ ಹರಿಸಬೇಕು. ಅಲ್ಲದೆ ಒಳಚರಂಡಿ ಮಾರ್ಗಗಳನ್ನು ಸುಸ್ಥಿತಿಯಲ್ಲಿ ಇಡಬೇಕು. ಇಲ್ಲದೆ ಹೋದರೆ ಒಳಚರಂಡಿ ನೀರು ಕುಡಿಯುವ ನೀರಿಗೆ ಸೇರಿ ಎಲ್ಲವೂ ಕಲುಷಿತವಾಗುತ್ತದೆ. ಹೀಗಾಗದಂತೆ ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಜೊತೆಗೆ ಎಲ್ಲೂ ಅನಗತ್ಯವಾಗಿ ಮಣ್ಣು ತುಂಬಿಕೊಳ್ಳದಂತೆ ನೋಡಿಕೊಳ್ಳಬೇಕು ಎಂದು ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಹೇಳಿದರು. ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ ಜಯಶಂಕರ್, ಜಲಮಂಡಲಿ ಸೇರಿದಂತೆ ಇತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News