ಬೆಂಗಳೂರು: ಸಾಲ-ಮನ್ನಾ ಮಾಡುತ್ತೇವೆ ಎಂದು ಹೇಳಿ ಅಧಿಕಾರ ಕಬಳಿಸಿದ #CoJa ಸರ್ಕಾರ, 8 ತಿಂಗಳಾದರೂ ರೈತರ ಆತ್ಮಹತ್ಯೆ ತಡೆಯಲಾಗುತ್ತಿಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಟ್ವೀಟ್ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಸದಾ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಾಗುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇದೀಗ ಕೇಂದ್ರ ಸರ್ಕಾರದ ಬಜೆಟ್ ಸಂಬಂಧ ಟ್ವೀಟ್ ಮಾಡಿದ್ದು, ಬಜೆಟ್ ನಲ್ಲಿ ರೈತರಿಗೆ ಘೋಷಣೆ ಮಾಡಿದ ವಿಶೇಷ ಯೋಜನೆಗಳ ಅನುಷ್ಠಾನಕ್ಕೆ ಯಾವುದೇ ಅಡ್ಡಿಆತಂಕಗಳಿಲ್ಲದೆ ಕೂಡಲೇ ಜಾರಿಗೆ ಅನುವಾಗುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದು ಸಂತಸದ ಸುದ್ಧಿ. ಸಾಲ-ಮನ್ನಾ ಮಾಡುತ್ತೇವೆ ಎಂದು ಹೇಳಿ ಅಧಿಕಾರ ಕಬಳಿಸಿದ #CoJa ಸರ್ಕಾರಕ್ಕೆ ೮ ತಿಂಗಳಾದರೂ ರೈತರ ಆತ್ಮಹತ್ಯೆ ತಡೆಯಲಾಗುತ್ತಿಲ್ಲ ಎಂದಿದ್ದಾರೆ.