ಮಾಸ್ಕ್ ಧರಿಸದೆ ಹೊರ ಬರುವುದು ಅಪರಾಧ: ಸಚಿವ ಜೆ.ಸಿ. ಮಾಧುಸ್ವಾಮಿ

ಲಾಕ್ ಡೌನ್ ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಕಾರ್ಯಗಳನ್ನು ನಡೆಸಲು ಅವಕಾಶವಿದೆ ಆದರೆ ಮೈಮರೆತು ನಿಯಮ ಉಲ್ಲಂಘಿಸಿದರೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ. ಸಾಮಾಜಿಕ ಅನಾರೋಗ್ಯ ತಲೆ ದೂರುತ್ತದೆ ಹಾಗಾಗಿ ಎಚ್ಚರಿಕೆಯಿಂದಿ ಇರಬೇಕಿದೆ - ಸಚಿವ ಜೆ.ಸಿ. ಮಾಧುಸ್ವಾಮಿ

Last Updated : Apr 16, 2020, 09:20 AM IST
ಮಾಸ್ಕ್ ಧರಿಸದೆ ಹೊರ ಬರುವುದು ಅಪರಾಧ: ಸಚಿವ ಜೆ.ಸಿ. ಮಾಧುಸ್ವಾಮಿ title=

ಬೆಂಗಳೂರು: ಸಾರ್ವಜನಿಕರು ಮಾಸ್ಕ್ ಧರಿಸದೆ ಮನೆಯಿಂದ ಹೊರಗಡೆ ಬಂದರೆ ಅಪರಾಧ ಎಂದು ಪರಿಗಣಿಸಲಾಗುತ್ತದೆ ಎಂದು ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ (JC Madhuswamy) ಎಚ್ಚರಿಸಿದ್ದಾರೆ.

ಹಾಸನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಜನತೆ ಏ.20ರವರೆಗೆ ಕಟ್ಟುನಿಟ್ಟಾಗಿ ಲಾಕ್ ಡೌನ್ ನಿಯಮಗಳನ್ನು ಪಾಲಿಸಬೇಕೆಂದು ಹೇಳಿದರಲ್ಲದೆ, ಸಾರ್ವಜನಿಕರು ಮನೆಯಲ್ಲೇ ತಯಾರಿಸಿದ ಮಾಸ್ಕ್ ಅಥವಾ ಕರವಸ್ತ್ರ, ಟವೆಲ್, ದುಪ್ಪಟ್ಟಗಳಿಂದ ಮೂಗು ಮತ್ತು ಬಾಯಿ ಮುಚ್ಚಿಕೊಂಡು ಅಗತ್ಯವಿದ್ದಾಗ ರಸ್ತೆಗೆ ಬರಬೇಕು ಎಂದು  ಹೇಳಿದರು.

ರೈತರಿಗೆ ಸಹಾಯ ಕೋರಿ ಮುಖ್ಯಮಂತ್ರಿ ಭೇಟಿಯಾದ ಹೆಚ್.ಡಿ. ರೇವಣ್ಣ

ಲಾಕ್ ಡೌನ್ (Lockdown) ಸಂದರ್ಭದಲ್ಲಿ ಕಾಮಗಾರಿ ಸ್ಥಳದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಕಾರ್ಯಗಳನ್ನು ನಡೆಸಲು ಅವಕಾಶವಿದೆ ಆದರೆ ಮೈಮರೆತು ನಿಯಮ ಉಲ್ಲಂಘಿಸಿದರೆ ವ್ಯತಿರಿಕ್ತ ಪರಿಣಾಮಗಳಾಗುತ್ತವೆ. ಸಾಮಾಜಿಕ ಅನಾರೋಗ್ಯ ತಲೆ ದೂರುತ್ತದೆ ಹಾಗಾಗಿ ಎಚ್ಚರಿಕೆಯಿಂದಿ ಇರಬೇಕಿದೆ ಎಂದರು.

ಕೊವೀಡ್-19 (Covid-19) ತಡೆಗಟ್ಟಲು ರಾಜ್ಯ ಸರ್ಕಾರದಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಅನುಸರಿಸುತ್ತಿದ್ದು, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ದಾನಿಗಳನ್ನು ಹುಡುಕಿ ಕೊರೋನಾ ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಅಗತ್ಯ ನೆರವು ಪಡೆಯಲು ತಿಳಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದರು.

ಸಂಸದ ಡಿ.ಕೆ. ಸುರೇಶ್ ಮನವಿಗೆ ಬಮೂಲ್ ಸ್ಪಂದನೆ: ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೆರವು

ಅಗತ್ಯ ಕೆಲಸವಿದ್ದಲ್ಲಿ ಮನೆಯಿಂದ ಒಬ್ಬರು ಮಾತ್ರ ಆಚೆ ಬರುವಂತೆ ನಿಯಮ ಮಾಡಲಾಗುವುದು ಎಂದ ಸಚಿವ ಮಾಧುಸ್ವಾಮಿ ಅವರು ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ ಒಂದೂವರೆ ಲಕ್ಷ ಮಾಸ್ಕ್ ಗಳನ್ನು ತಯಾರಿಸಲು ಯೋಜನೆ ರೂಪಿಸಿದ್ದು, ದಾನಿಗಳು ಸ್ವಯಂ ಸೇವಾ ಸಂಸ್ಥೆಗಳಡಿ ನೆರವನ್ನು ಪಡೆಯಬಹುದು ಎಂದು ಹೇಳಿದರು.

ಮೇ ತಿಂಗಳಿನಲ್ಲಿ ಕೇಂದ್ರ ಸರ್ಕಾರದಿಂದ 10 ಕೆ.ಜಿ. ಅಕ್ಕಿ ಮತ್ತು 2 ಕೆ.ಜಿ. ಬೆಳೆ ನೀಡಲಾಗುತ್ತದೆ, ಆನ್ ಲೈನ್ ನಲ್ಲಿ ವ್ಯಾಪಾರ ವಹಿವಾಟು ಮಾಡುವ ಮೂಲಕ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ವ್ಯವಸ್ಥೆ ಮಾಡಲಾಗುವುದು ಆ ಮೂಲಕ ಸಾರ್ವಜನಿಕರು ರಸ್ತೆಗೆ ಬರುವುದನ್ನು ನಿಯಂತ್ರಿಸಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.

ಅಧಿಕ ಧರಕ್ಕೆ ಮಾಸ್ಕ್ ಹಾಗೂ ಸ್ಯಾನಿಟೇಜರ್ ಮಾರಾಟ: ದೂರು ದಾಖಲಿಸಿಕೊಂಡು ದಂಡ ವಸೂಲಿ

ಸಾಮಾನ್ಯ ಜ್ವರ, ಕೆಮ್ಮು ಇದ್ದವರೆಲ್ಲ ಕೊರೋನಾ (Coronavirus)  ಸೋಂಕಿತರೆಂದು ಆತಂಕಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆಗಾಗಿ ಆ ಲಕ್ಷಣಗಳು ಕಂಡುಬಂದವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದರಲ್ಲದೆ, ರಾಜ್ಯದಲ್ಲಿ ಕೊರೋನಾ ತಪಾಸಣಾ ಪ್ರಯೋಗಾಲಯಗಳನ್ನು 50 ಕ್ಕೆ ಏರಿಸಲಾಗಿದೆ ಎಂದು ಹೇಳಿದರು.

ಸರಕು ಸಾಮಾನುಗಳನ್ನು ಸಾಗಾಣಿಕೆ ಮಾಡಲು ಯಾವುದೇ ನಿರ್ಬಂಧವಿಲ್ಲ. ಹಾಸನ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಇಲ್ಲದ್ದರಿಂದ ಏ.20ರ ನಂತರದಲ್ಲಿ ಕೃಷಿ, ಕಾಫಿ ತೋಟದ ಚಟುವಟಿಕೆಗಳಿಗೆ ಅವಕಾಶ ನೀಡಲಾಗುತ್ತದೆ ಆದರೆ ಹೋಟೆಲ್, ಸಾರ್ವಜನಿಕ ಸಾರಿಗೆ, ಚಿತ್ರಮಂದಿರ, ಸೂಪರ್ ಮಾರ್ಕೆಟ್ ಗಳಂತಹ ಜನ ಸೇರುವ ಸ್ಥಳಗಳನ್ನು ತೆಗೆಯಲಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡೆಸಿದರು.

ಮಡಿಕೇರಿಯಲ್ಲಿ‌ 8.280 ಲೀಟರ್ ಅಕ್ರಮ ಮದ್ಯ ವಶ

ಹಾಸನ‌ ಜಿಲ್ಲೆಯಾದ್ಯಂತ ಕೊರೋನಾ ವೈರಸ್ ಪರಿಣಾಮವನ್ನು ನಿಯಂತ್ರಣಕ್ಕೆ ತರುವಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಪ್ರಾಮಾಣಿಕವಾಗಿ ಅಗತ್ಯ ಕ್ರಮಗಳನ್ನು ಅನುಸರಿಸಿದ್ದು, ಮುಂದೆಯೂ ಏ.20 ರವರೆಗೆ ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಕ್ರಮವಹಿಸಿ ಜಿಲ್ಲೆಯ ಜನತೆಯ ರಕ್ಷಣೆ ಮಾಡಬೇಕು ಎಂದು ಜೆ.ಸಿ. ಮಾಧುಸ್ವಾಮಿ ಅವರು ನಿರ್ದೇಶನ ನೀಡಿದರು.

ಲಾಕ್ ಡೌನ್ ಪರಿಣಾಮಗಳು ಏನೇ ಇದ್ದರೂ ಜಿಲ್ಲೆಯ ಜನತೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಸಚಿವರು ಶ್ಲಾಘಿಸಿದರಲ್ಲದೆ, ಮುಂದೆಯೂ ಇದೇ ರೀತಿ ಸಹಕಾರ ನೀಡುವ ಮೂಲಕ ಕೊರೋನಾ ಸೋಂಕು ಜಿಲ್ಲೆಗೆ ಬಾರದಂತೆ ಜಾಗ್ರತೆವಹಿಸುವಂತೆ ಮನವಿ ಮಾಡಿದರು.
 

Trending News