ಬೆಂಗಳೂರು: ಶಾಸಕ ಎಂ.ಟಿ.ಬಿ.ನಾಗರಾಜ್ ಅವರಿಗೆ ಎರಡು ಹುದ್ದೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿರುವ ಕುರಿತು ವಿಚಾರಣೆ ನಡೆಸಲು ಅನುಮತಿ ಕೋರಿ ಪೋಲೀಸ್ ಮಹಾಸಂಘದ ಅಧ್ಯಕ್ಷ ಶಶಿಧರ್ ರಾಜ್ಯಪಾಲ ವಜುಬಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ. 


COMMERCIAL BREAK
SCROLL TO CONTINUE READING

ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಎಂ.ಟಿ.ಬಿ.ನಾಗರಾಜ್ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರನ್ನಾಗಿ ಮಾಡಲು ಮತ್ತು ಬಯಾಪ ಚೇರ್ಮನ್ ಮಾಡಿ, ಸಂಪುಟ ದರ್ಜೆ ಸ್ಥಾನ ನೀಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದ್ದರು. 


ಮುಖ್ಯಮಂತ್ರಿಗಳ ಈ ಶಿಫಾರಸ್ಸಿನಿಂದಾಗಿ ಒಬ್ಬ ಶಾಸಕರಿಗೆ ಏಕಕಾಲದಲ್ಲಿ ಎರಡು ಹುದ್ದೆ ನೀಡಿದಂತಾಗುತ್ತದೆ, ಇದು ಮುಖ್ಯಮಂತ್ರಿಗಳೇ ನಿಯಮಗಳನ್ನು ಗಾಳಿಗೆ  ತೂರಿದಂತಾಗಿದೆ ಎಂದು ಶಶಿಧರ್ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.