ಮುಂಬೈನಲ್ಲಿ ಅತೃಪ್ತ ಶಾಸಕರು ತಂಗಿರುವ ಹೋಟೆಲ್ ಮುಂದೆ ಕೈ ಕಾರ್ಯಕರ್ತರ ಪ್ರತಿಭಟನೆ

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಅತೃಪ್ತ ಶಾಸಕರು ಸದನಕ್ಕೆ ಹಾಜರಾಗದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಯುವ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

Last Updated : Jul 23, 2019, 04:07 PM IST
ಮುಂಬೈನಲ್ಲಿ ಅತೃಪ್ತ ಶಾಸಕರು ತಂಗಿರುವ ಹೋಟೆಲ್ ಮುಂದೆ ಕೈ ಕಾರ್ಯಕರ್ತರ ಪ್ರತಿಭಟನೆ title=

ಬೆಂಗಳೂರು: ಮುಂಬೈನಲ್ಲಿ ಅತೃಪ್ತ ಶಾಸಕರು ತಂಗಿರುವ  ರೆನೈಸೆನ್ಸ್ ಹೋಟೆಲ್ ಮುಂದೆ  ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ.

ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿರುವ ಅತೃಪ್ತ ಶಾಸಕರು ಸದನಕ್ಕೆ ಹಾಜರಾಗದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಯುವ ಕಾರ್ಯಕರ್ತರು ಧರಣಿ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನೂ ಕೂಗಿ, ಹೋಟೆಲ್ ಗೆ ಮುತ್ತಿಹಾಕಲು ಪ್ರಯತ್ನಿಸಿದ್ದಾರೆ. 

ಆದರೆ ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಅವರನ್ನು ಬಂಧಿಸಿ ಕರೆದೊಯ್ದಿದ್ದು, ಸದ್ಯ ಹೋಟೆಲ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Trending News