ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಬಾಂಬ್ ಸಿಡಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. 


COMMERCIAL BREAK
SCROLL TO CONTINUE READING

ಇಂದು ಮಧ್ಯಾಹ್ನ 1.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ನಡೆದ ಭ್ರಷ್ಟಾಚಾರವೊಂದರ ದಾಖಲೆ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪಕ್ಷದ ಆಪ್ತ ಸಚಿವರ ಮೂಲಕ ಯಡಿಯೂರಪ್ಪ ಅವರ ವಿರುದ್ಧ ರಣಕಹಳೆ ಊದುವ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಾಗಾಗಿ ಇಂದಿನ ಸುದ್ದಿಗೋಷ್ಠಿ ಸಾಕಷ್ಟು ಕುತೂಹಲ ಮೂಡಿಸಿದೆ. 


ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಹ ಬ್ರೇಕಿಂಗ್ ನ್ಯೂಸ್ ಕೊಡುವುದಾಗಿ ಹೇಳಿದ್ದರು. ಆದರೆ ಯಡಿಯೂರಪ್ಪ ನೀಡಿದ್ದ ಕಾಂಗ್ರೆಸ್ ವಿರುದ್ಧದ ಬ್ರೆಕಿಂಗ್ ನ್ಯೂಸ್ ಠುಸ್ ಆಗಿತ್ತು. ಆದರೀಗ ಕಾಂಗ್ರೆಸ್ ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರದ ಬಾಂಬ್ ಸಿಡಿಸಲು ಮುಂದಾಗಿದೆ. ಆದರೆ, ಈ ಬಾಂಬ್ ಸಿಡಿದು ಸದ್ದು ಮಾಡುತ್ತಾ ಅಥವಾ ಟುಸ್ ಪಟಾಕಿ ಆಗುತ್ತಾ ಎಂಬುದನ್ನು ಕಾದುನೋಡಬೇಕಿದೆ.