ಮಂಡ್ಯ : ದೇವಾಲಯ ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದಿದ್ದ ಸಂಸದೆ ಸುಮಲತಾ ಅಂಬರೀಶ್‌ ಅವರ ಮುಂದೆ ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ ನಡೆದಿದೆ. ಬ್ಯಾನರ್‌ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಬ್ಯಾನರ್‌ ವಿಚಾರವಾಗಿ ಈ ಗಲಾಟೆ ನಡೆದಿದೆ ಎಂದು ತಿಳಿದು ಬಂದಿದೆ.


COMMERCIAL BREAK
SCROLL TO CONTINUE READING

ಮಂಡ್ಯ ಜಿಲ್ಲೆಯ ಬಿ ಗೌಡಗೆರೆಯ ಮಹದೇಶ್ವರ ದೇವಾಲಯದ ಉದ್ಘಾಟನೆಗೆ ಸಂಸದೆ ಸುಮಲತಾ ಅಂಬರೀಶ್‌ ಆಗಮಿಸಿದ್ದರು. ಈ ವೇಳೆ ವೇದಿಕೆ ಬಳಿ ಜಿಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬಡಿದಾಡಿಕೊಂಡಿದ್ದಾರೆ. ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜಕೀಯ ಮಾಡ್ಬೇಡಿ, ಬ್ಯಾನರ್‌ನಲ್ಲಿ ಬರಿ ಕಾಂಗ್ರೆಸ್ ನಾಯಕರ ಹಾಗೂ ಸುಮಲತಾ ಅವರ ಫೋಟೊ ಹಾಕಿದ್ದೀರ ಎಂದು ಜೆಡಿಎಸ್ ಕಾರ್ಯಕರ್ತರ ಕಿರಿಕ್ ಮಾಡಿದ್ದರು.


ಇದನ್ನೂ ಓದಿ: Vijayapura: ಶಾಲೆಗೆ ಕುಡಿದು ಟೈಟ್ ಆಗಿ ಬಂದ ಶಿಕ್ಷಕ..!


ಕಾರ್ಯಕರ್ತರ ನಡುವೆ ಕಿತ್ತಾಟ ನಡೆದ ಹಿನ್ನಲೆ ವೇದಿಕೆಯಿಂದ ಸುಮಲತಾ ಅವರು ಕೆಳಗೆ ಇಳಿದರು. ಕಾರು ಹತ್ತಿ ಅಲ್ಲಿಂದ ಹೊರಡಲು ಮುಂದಾದರು. ನಂತರ ಪೊಲೀಸರ ಮದ್ಯ ಪ್ರವೇಶದಿಂದ ಗಲಾಟೆ ತಿಳಿಗೊಂಡಿತು. ಸಂಸದೆ ಸುಮಲತಾರನ್ನ ಸಮಾಧಾನಗೊಳಿಸಿ ಮತ್ತೆ ವೇದಿಕೆಗೆ ಗ್ರಾಮಸ್ಥರು ಕರೆತಂದು ದೇವಸ್ಥಾನದ ಉದ್ಘಾಟನೆ ಮಾಡಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.