ಬೆಂಗಳೂರು: ವಿಧಾಸಭೆ ಚುನಾವಣೆ ಬಳಿಕ ಇದೀಗ ವಿಧಾನಪರಿಷತ್ ಉಪಚುನಾವಣೆಯ ಸಿದ್ಧತೆ ನಡೆಯುತ್ತಿದೆ. ವಿಧಾನ‌ ಪರಿಷತ್‌ನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆ ನಡೆಯಲಿದೆ. ಜೂನ್ 30 ರಂದು ವಿಧಾನ‌ ಪರಿಷತ್‌ ಉಪಚುನಾವಣೆ ನಡೆಯಲಿದೆ. ನಾಳೆ ನಾಮಪತ್ರ ಸಲ್ಲಿಸಲು ಕೊನೆಯ ದಿನ. ಇಂದು ಕಾಂಗ್ರೆಸ್ ತನ್ನ ಮೂವರು ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೂ ವಿಧಾನ‌ ಪರಿಷತ್‌ ಉಪಚುನಾವಣೆಯ ಟಿಕೆಟ್‌ ನೀಡಲಾಗಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಯೋಗೀಶ್ ಗೌಡ ಕೊಲೆ ಪ್ರಕರಣ: ಧಾರವಾಡ ಪ್ರವೇಶಕ್ಕೆ ವಿನಯ ಕುಲಕರ್ಣಿಗಿಲ್ಲ ಅನುಮತಿ


ಕಾಂಗ್ರೆಸ್ ಹೈಕಮಾಂಡ್ ಇಂದು ವಿಧಾನ‌ ಪರಿಷತ್‌ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಜಗದೀಶ್ ಶೆಟ್ಟರ್, ಬೋಸರಾಜು ಮತ್ತು ತಿಪ್ಪಣ್ಣ ಕಮಕನೂರು ಮೂವರಿಗೆ ವಿಧಾನ‌ ಪರಿಷತ್‌ ಉಪಚುನಾವಣೆಗೆ ಟಿಕೆಟ್‌ ನೀಡಲಾಗಿದೆ. ಈ ಹಿಂದೆ ವಿಧಾನ‌ ಪರಿಷತ್‌ ಉಪಚುನಾವಣೆಯಲ್ಲಿ ಬಾಬುರಾವ್ ಚಿಂಚನಸೂರು ಅವರಿಗೆ ಕಾಂಗ್ರೆಸ್ ಟಿಕೆಟ್‌ ನೀಡುತ್ತೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಅವರಿಗೆ ಅನಾರೋಗ್ಯದ ಕಾರಣ ಟಿಕೆಟ್‌ ಕೈತಪ್ಪಿದೆ.  


ಲಕ್ಷ್ಮಣ ಸವದಿ, ಬಾಬುರಾವ್ ಚಿಂಚನಸೂರು, ಆರ್.ಶಂಕರ್‌ ಅವರ ರಾಜೀನಾಮಿಯಿಂದ ವಿಧಾನ‌ ಪರಿಷತ್‌ನಲ್ಲಿ ಮೂರು ಸ್ಥಾನಗಳು ತೆರವಾಗಿದ್ದವು. ಲಕ್ಷ್ಮಣ್ ಸವದಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಜಗದೀಶ್ ಶೆಟ್ಟರ್, ಆರ್. ಶಂಕರ್ ಅವರಿಂದ ತೆರವಾದ ಸ್ಥಾನಕ್ಕೆ ತಿಪ್ಪಣ್ಣ ಕಮಕನೂರು ಮತ್ತು ಬಾಬುರಾವ್ ಚಿಂಚನಸೂರ್‌ ಅವರಿಂದ ತೆರವಾದ ಸ್ಥಾನಕ್ಕೆ ಸಚಿವ ಬೋಸರಾಜು ಸ್ಪರ್ಧಿಸುತ್ತಿದ್ದಾರೆ. 


ಇದನ್ನೂ ಓದಿ: ಲೀಥಿಯಂ ಕೋಶ ಉತ್ಪಾದನೆ: ರಾಜ್ಯದಲ್ಲಿ 8 ಸಾವಿರ ಕೋಟಿ ರೂ. ಹೂಡಿಕೆಗೆ ಐಬಿಸಿ ಕಂಪನಿ ಒಲವು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.