ನವದೆಹಲಿ: ಕಾಂಗ್ರೆಸ್ ಪಕ್ಷದ ಬಹುನಿರೀಕ್ಷಿತ  ಅಭ್ಯರ್ಥಿಗಳ ಪಟ್ಟಿಯು ಇಂದು ಮಧ್ಯಾಹ್ನ 3 ಗಂಟೆಗೆ ಬಿಡುಗಡೆಯಾಗಲಿದೆ. ಎಐಸಿಸಿಯ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್  ಬಿಡುಗಡೆ ಮಾಡಲಿದ್ದಾರೆ.


COMMERCIAL BREAK
SCROLL TO CONTINUE READING

ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿ ಹೈ ಕಮಾಂಡ್ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸಭೆ ನಡೆಸಿ ಪಕ್ಷದ ನಾಯಕರ ಮದ್ಯ ಟಿಕೆಟ್ ಹಂಚಿಕೆ ವಿಚಾರವಾಗಿ ಭಿನ್ನಾಭಿಪ್ರಾಯಗಳನ್ನು ಶಮನ ಮಾಡುವ ನಿಟ್ಟಿನಲ್ಲಿ ಸಭೆ ಮೇಲೆ ಸಭೆ ನಡಿಸಿ ಪ್ರಯತ್ನ ನಡಿಸಿತ್ತು. ಈಗ ಎಲ್ಲರ ಅಭಿಪ್ರಾಯಗಳನ್ನು ಆಲೈಸಿ ಒಮ್ಮತಕ್ಕೆ ಬಂಧಿರುವ ಹೈ ಕಮಾಂಡ್ ಕೊನೆಗೂ ಪಟ್ಟಿ ಬಿಡುಗಡೆಗೆ ಹಸಿರು ನಿಶಾನೆ ತೋರಿದೆ.ಆದ್ದರಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುನ್ನ ಕೊನೆಯ ಬಾರಿಗೆ ವಾರ ರೂಂ ನಲ್ಲಿ ಅನೌಪಾಚಾರಿಕ ಸಭೆಯನ್ನು ಹೈಕಮಾಂಡ್ ನಡೆಸಲಿದೆ, ನಂತರ ಸುದ್ದಿಗೊಷ್ಟಿಯ ಮೂಲಕ ಎಐಸಿಸಿ  ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದ್ದಾರೆ.


ಆದರೆ ಈ ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ತುರ್ತು ಕಾರ್ಯದ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಎರಡು ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.