ಬೆಂಗಳೂರು: ವಯನಾಡ್ ದುರಂತದ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುವುದು ತರವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ NDA ಮೈತ್ರಿಕೂಟ ನಡೆಸುತ್ತಿರುವ ಪಾದಯಾತ್ರೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದರು.


COMMERCIAL BREAK
SCROLL TO CONTINUE READING

ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಮತ್ತು ಜಾನ್ ಬ್ರಿಟಾಸ್ ಅವರು ಕೇರಳದ ವಯನಾಡ್ ದುರಂತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ ಎಂದು ಆಕ್ಷೇಪಿಸಿದರು.


ಇದನ್ನೂ ಓದಿ: ಮುಂದಿನ 3 ದಿನ ರಾಜ್ಯದಲ್ಲಿ ಕುಂಭದ್ರೋಣ ಮಳೆ! ವರುಣಾರ್ಭಟಕ್ಕೆ ಈ ಜಿಲ್ಲೆಗಳಲ್ಲಿ ಜಲಪ್ರವಾಹದ ಮುನ್ಸೂಚನೆ!? 


ಕೇರಳ ಸರ್ಕಾರಕ್ಕೆ ಕೇಂದ್ರ ಸರ್ಕಾರ ಅವಘಡಕ್ಕೂ ಮೊದಲೇ ಮುನ್ನೆಚ್ಚರಿಕೆ ನೀಡಿದೆ ಎಂದು ಸ್ಪಷ್ಟಪಡಿಸಿದರು. ನಾವು ನಿಜಕ್ಕೂ ಮೊದಲೇ  ಎಚ್ಚರಿಕೆ ನೀಡಿದ್ದೇವೆ ಎಂದು ಕೇಂದ್ರ ಗೃಹ ಸಚಿವರು ಸ್ಪಷ್ಟಪಡಿಸಿದ ನಂತರವೂ ಕಾಂಗ್ರೆಸ್ ನಾಯಕರು ಆರೋಪ ಮಾಡುತ್ತಿದ್ದು, ಇದು ರಾಜಕೀಯ ಕಾರಣಕ್ಕಲ್ಲದೆ ಮತ್ತೇನು ಅಲ್ಲ ಎಂದು ಹರಿಹಾಯ್ದರು.


ಜುಲೈ 23 ರಂದೇ ಕೇರಳ ಸರ್ಕಾರಕ್ಕೆ ಮುನ್ನೆಚ್ಚರಿಕೆ, ಅಗತ್ಯ ಮಾಹಿತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಿದ್ದರೂ ಸ್ಥಳೀಯ ಸರ್ಕಾರ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಿದೆ. ಕೇರಳ ಸರ್ಕಾರದ ಆಡಳಿತ ವ್ಯವಸ್ಥೆ ಸರಿಯಿಲ್ಲ. ಅದನ್ನು ಕೇಂದ್ರದ ಮೇಲೆ ಹೊರಿಸುವುದು ಸರಿಯಲ್ಲ ಎಂದು ಜೋಶಿ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.


ವಯನಾಡ್ ದುರಂತದ ಕುರಿತು ಕಾಂಗ್ರೆಸ್ ಆರೋಪ ಮಾಡಿದರೆ ಅದು ರಾಜಕೀಯವಲ್ಲ, ನಾವು ಸ್ಪಷ್ಟನೆ ನೀಡಿದರೆ ರಾಜಕೀಯ ಮಾಡಿದ ಹಾಗೆ ಆಗುತ್ತದೆಯೇ? ಎಂದು ಪ್ರಶ್ನಿಸಿದರು.


ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಕೆಕೆಆರ್‌ಡಿಬಿಯಿಂದ ಶೇ.25ರಷ್ಟು ಅನುದಾನ ಮೀಸಲು 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.