ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಬ್ಬರ ‘ಮನೆ ಬಾಗಿಲಿಗೆ ಆರೋಗ್ಯ ಸೇವೆ’ ಒದಗಿಸುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರವು ‘ಗೃಹ ಆರೋಗ್ಯ" ಯೋಜನೆಯನ್ನು ಜಾರಿಗೆ ತರಲಿದೆ. ಈ ಬಗ್ಗೆ ಅರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಾಹಿತಿ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಕಾಂಗ್ರೆಸ್, ‘ರಾಜ್ಯ ಸರ್ಕಾರದಿಂದ ಹೊಸದಾಗಿ “ಗೃಹ ಆರೋಗ್ಯ“ ಯೋಜನೆ ಜಾರಿಯಾಗಲಿದೆ. ಮನೆ ಬಾಗಿಲಿಗೆ ಆರೋಗ್ಯ ಸೇವೆ ಎಂಬ ಆಲೋಚನೆಯೊಂದಿಗೆ ಗೃಹ ಆರೋಗ್ಯ ಎಂಬ ಯೋಜನೆಯ ರೂಪುರೇಷೆಯನ್ನು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೆರೆದಿಟ್ಟಿದ್ದಾರೆ’ ಎಂದು ಹೇಳಿದೆ. ‘ಉಚಿತ ಅರೋಗ್ಯ ತಪಾಸಣೆ, ಉಚಿತ ಚಿಕಿತ್ಸೆ, ಉಚಿತ ಔಷಧ ನೀಡುವುದು ಗೃಹ ಆರೋಗ್ಯ ಯೋಜನೆಯ ಉದ್ದೇಶವಾಗಿದೆ. ಜನಪರ ಚಿಂತನೆ, ಯೋಜನೆಗಳು ಸಾಧ್ಯವಾಗುವುದು ಕಾಂಗ್ರೆಸ್ಸಿಗೆ ಮಾತ್ರ’ವೆಂದು ಟ್ವೀಟ್ ಮಾಡಿದೆ.


ಇದನ್ನೂ ಓದಿ'ಬಾಹ್ಯಾಕಾಶಕ್ಕೆ ಹೋಗಲಿದೆ ಭಾರತದ ಮಹಿಳಾ ರೋಬೋಟ್ ವ್ಯೋಮಿತ್ರ'


ಮನೆ ಬಾಗಿಲಿಗೆ ಡಾಕ್ಟರ್!


ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ಅದೇ ರೀತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸನೆ ನಡೆಸಿ ಉಚಿತ ಔಷಧ ನಿಡುವ ‘ಗೃಹ ಆರೋಗ್ಯ ಯೋಜನೆ’ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ.


ಪ್ರಾಯೋಗಿಕವಾಗಿ ಮೊದಲು 8 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿಂತನೆ ನಡೆಸಿದೆ. ೀ ಬಗ್ಗೆ ಮಾಹಿತಿ  ನೀಡಿರುವ ಸಚಿವ ದಿನೇಶ್ ಗುಂಡೂರಾವ್, ‘ಸಮಸ್ಯೆ ಕಾಣಿಸಿಕೊಂಡ ನಂತರ ಚಿಕಿತ್ಸೆ ಬದಲು ಸಮಸ್ಯೆ ಇಲ್ಲವೇ ರೋಗ ಕಾಣಿಸಿಕೊಳ್ಳುವ ಪೂರ್ವದಲ್ಲಿಯೇ ತಪಾಸಣೆ ನಡೆಸುವುದು ಮುಖ್ಯ’ ಎಂದು ಹೇಳಿದ್ದಾರೆ.  


ಇದನ್ನೂ ಓದಿ: "ತಪ್ಪು ಮಾಹಿತಿಯ ಹರಡುವಿಕೆಯು ಯಾವುದೇ ದೇಶಕ್ಕೆ ದೊಡ್ಡ ಅಪಾಯ"


‘ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಸಿಬ್ಬಂದಿ ಪ್ರತಿ ಮನೆಗೆ ಭೇಟಿ ನೀಡಿ ಕುಟುಂಬದ ಎಲ್ಲಾ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ರಕ್ತದೊತ್ತಡ, ಮಧುಮೇಹ ಸೇರಿದಂತೆ ಇನ್ನಿತರ ಕಾಯಿಲೆಗಳಿಗೆ ಸ್ಥಳದಲ್ಲಿಯೇ ಔಷಧ ನೀಡುತ್ತದೆ. ಗಂಭೀರ ಸಮಸ್ಯೆ ಇರುವವರನ್ನು ಗುರುತಿಸಿ ಸೂಕ್ತ ಚಿಕಿತ್ಸೆಗೆ ಶಿಫಾರಸು ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.