ಸಿದ್ದರಾಮಯ್ಯ ಸರ್ಕಾರ ನೀಡಿದ್ದು ಕೇವಲ 'ಬರ'ದ ಭಾಗ್ಯ- ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದು ಬರ ಭಾಗ್ಯ ಮತ್ತು ಅರೆಬರೆ ಕುಡಿಯುವ ನೀರಿನ ಭಾಗ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

Last Updated : Mar 12, 2018, 05:30 PM IST
ಸಿದ್ದರಾಮಯ್ಯ ಸರ್ಕಾರ ನೀಡಿದ್ದು ಕೇವಲ 'ಬರ'ದ ಭಾಗ್ಯ- ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯ title=

ರಾಯಚೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ್ದು ಬರ ಭಾಗ್ಯ ಮತ್ತು ಅರೆಬರೆ ಕುಡಿಯುವ ನೀರಿನ ಭಾಗ್ಯ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

ಇಲ್ಲಿ ನಡೆದ ಜೆಡಿಎಸ್ ವಿಕಾಸಯಾತ್ರೆ ಸಮಾವೇಷವನ್ನು ಉದ್ದೇಶಿಸಿ ಮಾತನಾಡಿದ ಅವರು ಸಾಲ ಮನ್ನಾ ಮಾಡಲು ಒತ್ತಾಯಿಸಿದರೆ ಸರ್ಕಾರದಲ್ಲಿ ದುಡ್ಡಿಲ್ಲ ಎನ್ನುವ ಸಿದ್ದರಾಮಯ್ಯ ಅವರು ಈಗ ತಮ್ಮ ಸರ್ಕಾರದ ಸಾಧನೆಗಳ ಜಾಹೀರಾತಿಗಾಗಿ ಸಾರ್ವಜನಿಕ ಹಣವನ್ನೇ ಖರ್ಚು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. 

ಕಳೆದ ವರ್ಷ 50 ಸಾವಿರ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದ ಸಿದ್ದರಾಮಯ್ಯ ಅವರು, ಇದುವರೆಗೂ ಆ ಮಾತನ್ನು ನೆರವೇರಿಸದೆ ಹೀಗೆ ರಾಜ್ಯದ ಜನರಿಗೆ ಸಿದ್ದರಾಮಯ್ಯ ಟೋಪಿ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆ ಅಧಿಕಾರ ನೀಡಿದರೆ, ಅಧಿಕಾರಕ್ಕೆ ಬಂದ ಇಪ್ಪತ್ನಾಲ್ಕು ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಹೇಳಿದರು.

Trending News