ಹುಬ್ಬಳ್ಳಿ:  ಕಾಂಗ್ರೆಸ್ ಹಿರಿಯ ನಾಯಕರ ಭ್ರಷ್ಟಾಚಾರ ಸಮರ್ಥನೆ ವಿಪರ್ಯಾಸ. ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕ ರಾಜ್ಯ ಸರ್ಕಾರವನ್ನು ಎಟಿಎಂ ಅನ್ನಾಗಿ ಮಾಡಿಕೊಂಡಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರ ಶಾಸಕ ಮಹೇಶ್ ಟೆಂಗಿನಕಾಯಿ ಗಂಭೀರ ಸ್ವರೂಪದ ಆರೋಪ ಮಾಡಿದರು.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರ ಶಾಸಕ ಮಹೇಶ್ ಟೆಂಗಿನಕಾಯಿ (MLA Mahesh Tenginakai), ಮೈಸೂರು ನಗರಾಭಿವೃದ್ಧಿ (ಮುಡಾ) ಹಗರಣ (MUDA Scam), ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಇದೊಂದು ತಾರ್ಕಿಕ ಅಂತ್ಯ ಕಾಣುತ್ತದೆ ಎಂದು ಭಾವಿಸಲಾಗಿತ್ತು. ಆದರೆ ಈಗ ಏಕಾಏಕಿ ಕಾಂಗ್ರೆಸ್ ಹಿರಿಯ ನಾಯಕರಾದ ವೇಣುಗೋಪಾಲ ಹಾಗೂ ರಣದೀಪ್ ಸಿಂಗ್ ಸುರ್ಜೆವಾಲ್ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣವನ್ನ ಸಮರ್ಥನೆ ಮಾಡಿಕೊಂಡಿದ್ದು ವಿಪರ್ಯಾಸ ಎಂದರು. 


ಇದನ್ನೂ ಓದಿ- "ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡೊವರೆಗೂ ಹೋರಾಟ ಮುಂದುವರೆಯುತ್ತೆ"


ಇನ್ನು ಯಾದಗಿರಿ ಪಿಎಸ್ ಐ ಪರಶುರಾಮ ಚೆಲವಾದಿ ಆತ್ಮಹತ್ಯೆ ಹಾಗೂ ಇತರ ಇಲಾಖೆಯ ನೌಕರರ ಕೆಲಸ ಬಹಳ ಆತಂಕ ಆಗಿದೆ ಎಂದರು. 


ಇದನ್ನೂ ಓದಿ- ಬಿಜೆಪಿ-ಜೆಡಿಎಸ್‌ ಪಿತೂರಿಗೆ ಜಗ್ಗುವುದಿಲ್ಲ, ಜನರ ಬಳಿಗೆ ತೆರಳಿ ವಾಸ್ತವದ ಅರಿವು ಮೂಡಿಸಲು ಸಂಕಲ್ಪ: ಕೆಸಿ ವೇಣುಗೋಪಾಲ್


ಪಾದಯಾತ್ರೆಗೆ ತೆರಳಲಿರುವ ಹು-ಧಾ ಕಾರ್ಯಕರ್ತರು: 
ರಾಜ್ಯ ಸರ್ಕಾರದ (State Govt) ಹಗರಣಗಳ ವಿರುದ್ಧವಾಗಿ ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ಜಂಟಿ ಪಾದಯಾತ್ರೆಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರ ಹಾಗೂ ಧಾರವಾಡ ಜಿಲ್ಲೆಯ ಅಪಾರ ಪ್ರಮಾಣದ ಕಾರ್ಯಕರ್ತರು ನಾಳೆ ತೆರಳುವುದಾಗಿ ಇದೇ ಸಂದರ್ಭದಲ್ಲಿ ಅವರು ತಿಳಿಸಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.