ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ: ಸಿಎಂ ಬೊಮ್ಮಾಯಿ

ಕಾಂಗ್ರೆಸ್ ಶಾಸಕರು ಮತದಾರರಿಗೆ ಆಮಿಷ ಒಡ್ಡುವಾಗ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಬಗ್ಗೆ ಇವರು ಏನೂ ಮಾತನಾಡುವುದಿಲ್ಲ. ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ. ಅಲ್ಲಿ ಬಾಂಬ್ ಕುಕ್ಕರ್ ಇಲ್ಲಿ ಪ್ರೆಶರ್ ಕುಕ್ಕರ್. 

Written by - Prashobh Devanahalli | Last Updated : Jan 25, 2023, 02:37 PM IST
  • ಈ ದೇಶದ ಮೊದಲ ಭ್ರಷ್ಟಾಚಾರದ ಜೀಪ್ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ಪಕ್ಷದಿಂದ
  • ಅಂದಿನ ರಕ್ಷಣಾ ಸಚಿವರು ರಾಜೀನಾಮೆ ನೀಡಬೇಕಾಗಿ ಬಂತು.
  • ಸ್ವಾತಂತ್ರ್ಯ ಬಂದ ನಂತರದಲ್ಲಿ ಭ್ರಷ್ಟಾಚಾರ ಅಲ್ಲಿಂದ ಪ್ರಾರಂಭವಾಯಿತು.
ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ: ಸಿಎಂ ಬೊಮ್ಮಾಯಿ title=
Corruption

ಬೆಂಗಳೂರು: ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ದೂರು ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ  ಇದು  ಅತ್ಯಂತ ಕೀಳು ಮಟ್ಟದ್ದು. ಹೇಳಿಕೆ ಕೊಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡುತ್ತಾರೆ. ಮೊನ್ನೆ ದಿಗ್ವಿಜಯ ಸಿಂಗ್ ಅವರು ಒಂದು ಹೇಳಿಕೆ ಕೊಟ್ಟಿದ್ದಾರೆ. ನಿನ್ನೆ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಿದ್ದು,  ಯಾರಾದರೂ ಹೇಳಿಕೆ ನೀಡಿದರೆ. ಅದಕ್ಕೆ ಸರ್ಕಾರ ಜವಾಬ್ದಾರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಅವರವರ ವೈಯಕ್ತಿಕ ಹೇಳಿಕೆಗಳಿಗೆ  ಅವರೇ ಜವಾಬ್ದಾರರು ಎಂದು  ಸುಪ್ರೀಂಕೋರ್ಟ್ ತೀರ್ಪು ಕೂಡ ಬಂದಿದೆ. ಇದೆಲ್ಲ ಗೊತ್ತಿದ್ದು, ಕೇವಲ ರಾಜಕೀಯ ಕಾರಣಕ್ಕೆ, ಸೋಲು ಗ್ಯಾರಂಟಿಯಾಗಿರವ ಕಾರಣ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಿ ಜನರ ದಾರಿ ತಪ್ಪಿಸುವ ಸಣ್ಣ ಪ್ರಯತ್ನ. ಆದ್ರೆ ಜನಕ್ಕೆ ಇದೆಲ್ಲಾ ಗೊತ್ತಿದೆ. ಮುಂದೆ ಇನ್ನೂ ಪ್ರಯತ್ನ ಮಾಡುತ್ತಾರೆ. ದೇಶದಲ್ಲಿ ಕಾನೂನಿದೆ. ಆ ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿದೆ ಎಂದರು.

ಇದನ್ನೂ ಓದಿ- Bengaluru: 44 ಲಕ್ಷ ಮೌಲ್ಯದ 114 ಕೆಜಿ ಗಾಂಜಾ ವಶ; ಇಬ್ಬರ ಬಂಧನ!

ಕಾಂಗ್ರೆಸ್ ಶಾಸಕರು ಮತದಾರರಿಗೆ ಆಮಿಷ ಒಡ್ಡುವಾಗ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಬಗ್ಗೆ ಇವರು ಏನೂ ಮಾತನಾಡುವುದಿಲ್ಲ. ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ. ಅಲ್ಲಿ ಬಾಂಬ್ ಕುಕ್ಕರ್ ಇಲ್ಲಿ ಪ್ರೆಶರ್ ಕುಕ್ಕರ್. ಚುನಾವಣೆ ಸಮಯದಲ್ಲಿ ಪ್ರೆಶರ್ ಕುಕ್ಕರ್ ಕೊಟ್ಟು ಗೆಲ್ಲುವುದು. ಹೀಗಾಗಿ ಅವರಿಗೆ ಕುಕ್ಕರ್ ಮೇಲೆ ಬಹಳ ಪ್ರೀತಿ. ಅದರಲ್ಲಿ ಬಾಂಬ್ ಇಟ್ಟರೂ ಅಲ್ಲ ಪ್ರೆಶರ್  ಕುಕ್ಕರ್ ಎನ್ನುತ್ತಾರೆ. ಈ ರೀತಿಯ ದೊಂಬರಾಟದಿಂದ ಯಾವುದೇ ಸಹಾಯವಾಗುವುದಿಲ್ಲ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದೆ ಎಂದು ಇದೇ ವೇಳೆ ಕಾಂಗ್ರೆಸ್ ವಿರುದ್ಧ ವಾಗ್ಧಾಳಿ ನಡೆಸಿದರು. 

ಬಿಜೆಪಿ  ಎ ಟೀಂ:
ಜೆಡಿಎಸ್ ಅವರು ಕಾಂಗ್ರೆಸ್ ಬಿಜೆಪಿ ಟೀಂ ಎನ್ನುತ್ತಾರೆ. ಕಾಂಗ್ರೆಸ್ ನವರು ಜೆಡಿಎಸ್ ಹಾಗೂ ಬಿಜೆಪಿ ಟೀಂ ಎನ್ನುತ್ತಾರೆ. ನಾವು ಎ ಟೀಂ ಎಂದು ಇಬ್ಬರೂ ಒಪ್ಪುತ್ತಾರೆ. ಯಾವಾಗ ಅವರು ಬಿ ಟೀಂ ಆಗುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ನಮಗೆ ಎ , ಬಿ ಎನ್ನುವುದಕ್ಕಿಂತ ಜನತೆಯ ಟೀಂ  ಎಂದರು.

ಇದನ್ನೂ ಓದಿ- ಮಲೆಮಹದೇಶ್ವರ ಬೆಟ್ಟ ಬಳಿ ಗುಜರಾತ್ ಪ್ರವಾಸಿಗರ ಬಸ್ ಪಲ್ಟಿ- 15ಕ್ಕೂ ಹೆಚ್ಚು ಮಂದಿಗೆ ಗಾಯ
 
ದೇಶದ ಮೊದಲ ಭ್ರಷ್ಟಾಚಾರದ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ಪಕ್ಷದಿಂದ:

ಬೊಮ್ಮಾಯಿ ಭ್ರಷ್ಟಾಚಾರದ ಪಿತಾಮಹ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಈ ದೇಶದ ಮೊದಲ ಭ್ರಷ್ಟಾಚಾರದ ಜೀಪ್  ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ಪಕ್ಷದಿಂದ. ಅಂದಿನ ರಕ್ಷಣಾ ಸಚಿವರು ರಾಜೀನಾಮೆ ನೀಡಬೇಕಾಗಿ ಬಂತು. ಸ್ವಾತಂತ್ರ್ಯ ಬಂದ ನಂತರದಲ್ಲಿ ಭ್ರಷ್ಟಾಚಾರ  ಅಲ್ಲಿಂದ ಪ್ರಾರಂಭವಾಯಿತು. ಭ್ರಷ್ಟಾಚಾರ ಕಾಂಗ್ರೆಸ್ ನ ಅವಿಭಾಜ್ಯ ಅಂಗ. ಡಿ.ಕೆ.ಶಿವಕುಮಾರ್ ಬಹಳ ಸ್ವಚ್ಛ ಮನುಷ್ಯ. ಅವರಷ್ಟು ಸ್ವಚ್ಛ ಮನುಷ್ಯ ರಾಜಕಾರಣದಲ್ಲಿ ಯಾರು ಇಲ್ಲ ಎಂದು ವ್ಯಂಗ್ಯವಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News