ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಂಜೆ 7 ಗಂಟೆಗೆ ಮಹತ್ವದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. 


COMMERCIAL BREAK
SCROLL TO CONTINUE READING

ನಗರದ ಮೌಂಟ್‍ ಕಾರ್ಮೆಲ್‍ ಕಾಲೇಜು ಸಮೀಪ ಇರುವ ಶಾಂಗ್ರಿಲಾ ಹೋಟೆಲ್‍ನಲ್ಲಿ ಸೆಪ್ಟೆಂಬರ್ 25ರಂದು ಸಂಜೆ 7 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು, ವಿಧಾನಪರಿಷತ್ ಚುನಾವಣೆ, ಭಿನ್ನಮತ ಶಮನ, ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳಿಗೆ ನೇಮಕ, ಲೋಕಸಭಾ ಚುನಾವಣೆ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ. 
 
ಈಗಾಗಲೇ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪ್ರಕಟಿಸಿದೆ. ಆದರೆ ಬಿಜೆಪಿ ಈ ಚುನಾವಣೆಗೆ ಯಾವುದೇ ಅಭ್ಯರ್ಥಿಯನ್ನೂ ಕಣಕ್ಕಿಳಿಸದೆ ಹಿಂದೆ ಸರಿದಿದೆ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಯಾವುದೇ ತೊಂದರೆಯಿಲ್ಲದೆ ಗೆಲುವು ದೊರೆಯಲಿದೆ. ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲು 118 ಸ್ಥಾನಗಳ ಅಗತ್ಯ ಇತ್ತು. ಬಿಜೆಪಿ ಬಳಿ ಕೇವಲ 104 ಸದಸ್ಯರ ಬಲ ಇರುವುದರಿಂದ ಸ್ಪರ್ಧಿಸದಿರಲು ನಿರ್ಧರಿಸಿದೆ.