ಬೆಂಗಳೂರು: ಬಿಜೆಪಿ ಸಚಿವರ ವಿರುದ್ಧ ʼಮಿಸಿಂಗ್‌ ಮಿನಿಸ್ಟರ್‌ʼ ಅಭಿಯಾನವನ್ನು ಕಾಂಗ್ರೆಸ್‌ ಪಡೆ ಮುಂದುವರೆಸಿದೆ. ಇಂದು ಕೃಷಿ ಸಚಿವರು ಕಾಣೆಯಾಗಿದ್ದಾರೆ. ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು ಎಂದು ಬಿ.ಸಿ.ಪಾಟೀಲ್‌ ಅವರ ಕಾಲೆಳೆದಿದ್ದಾರೆ.


COMMERCIAL BREAK
SCROLL TO CONTINUE READING

ಕೃಷಿ ಸಚಿವರು ಕಾಣೆಯಾಗಿದ್ದಾರೆ. ಹೆಸರು: ಬಿ.ಸಿ.ಪಾಟೀಲ್‌, ಗೋದಿಬಣ್ಣ, ಕಟ್ಟುಮಸ್ತಾದ ಮೈಕಟ್ಟು, ದುಂಡುಮುಖ, ದಪ್ಪ ಮೀಸೆ. ವಯಸ್ಸು : 65. ಸಿನೆಮಾ ಪ್ರದರ್ಶನದಲ್ಲಿ ಕಾಣಿಸಿಕೊಂಡವರು ನಂತರ ಪತ್ತೆಯಾಗಿಲ್ಲ. ಹಲವು ತಿಂಗಳಿಂದ ಅತಿವೃಷ್ಟಿಯ ಸಂಕಷ್ಟದಲ್ಲಿರುವ ರಾಜ್ಯದ ರೈತರು ಸಚಿವರನ್ನು ಕಾಣದೆ ಆತಂಕಗೊಂಡಿದ್ದಾರೆ. ದಯಮಾಡಿ ಹುಡುಕಿಕೊಡಿ ಎಂದು ಟ್ಟೀಟ್‌ ಮಾಡುವ ಮೂಲಕ ಸಚಿವರ ವಿರುದ್ಧ ಹರಿಹಾಯ್ದಿದ್ದಾರೆ.


ಇದನ್ನೂ ಓದಿ: ಆನ್‌ಲೈನ್‌ನಲ್ಲಿ ಹಣ ಪಡೆಯುವ ಮುಂಚೆ ಎಚ್ಚರ..!


ಅಲ್ಲದೆ, ಕೇಂದ್ರ ತಂಡದ ವರದಿಯಂತೆ ರಾಜ್ಯದಲ್ಲಿ ಅತಿವೃಷ್ಟಿಯ ನಷ್ಟ ₹3000 ಕೋಟಿ. ವಾಸ್ತವದಲ್ಲಿ ಈ ಮೊತ್ತ ದೊಡ್ಡದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಅಸಲಿ 'ಜನಸ್ಪಂದನೆ' ಎಂದರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದು, ವಿಶೇಷ ಪ್ಯಾಕೇಜ್ ಘೋಷಿಸುವುದು, ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಡ ಹಾಕುವುದು. 'ಜನಸ್ಪಂದನೆ' ಹೆಸರಲ್ಲಿ ಸಮಾವೇಶ ಮಾಡಿದರೆ ಜನರಿಗೆ ಸ್ಪಂದಿಸಿದಂತಾಗದು ಎಂದಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.