BJP: 'ಬಿಜೆಪಿ ಸಂಪರ್ಕದಲ್ಲಿದ್ದಾರೆ 15-20 ಜನ ಕಾಂಗ್ರೆಸ್ ಶಾಸಕರು'

ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದ್ದು ನಿಜ. ಕಾಂಗ್ರೆಸ್ಸಿನ 15-20 ಮಂದಿ ಶಾಸಕರು ಬಿಜೆಪಿಗೆ ಬರಲು ಸಂಪರ್ಕದಲ್ಲಿದ್ದಾರೆ.

Last Updated : Feb 18, 2021, 04:42 PM IST
  • ಹೊಸ ಬಾಂಬ್‌ ಎಸೆದಿದ್ದಾರೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲ್‌
  • ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದ್ದು ನಿಜ. ಕಾಂಗ್ರೆಸ್ಸಿನ 15-20 ಮಂದಿ ಶಾಸಕರು ಬಿಜೆಪಿಗೆ ಬರಲು ಸಂಪರ್ಕದಲ್ಲಿದ್ದಾರೆ.
  • ಸದ್ಯ ನಮಗೆ ಅವರ ಅವಶ್ಯಕತೆ ಇಲ್ಲ ಎಂದು ಸುಮ್ಮನಿದ್ದೇವೆ. ಕಾಂಗ್ರೆಸ್‌ ಶಾಸಕರು ನಮ್ಮ ಪಕ್ಷಕ್ಕೆ ಬರಲು ಅವರೇ ನಮಗೆ ಕೇಳುತ್ತಿದ್ದಾರೆ.
BJP: 'ಬಿಜೆಪಿ ಸಂಪರ್ಕದಲ್ಲಿದ್ದಾರೆ 15-20 ಜನ ಕಾಂಗ್ರೆಸ್ ಶಾಸಕರು' title=

ವಿಜಯಪುರ: ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದ್ದು ನಿಜ. ಕಾಂಗ್ರೆಸ್ಸಿನ 15-20 ಮಂದಿ ಶಾಸಕರು ಬಿಜೆಪಿಗೆ ಬರಲು ಸಂಪರ್ಕದಲ್ಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ ಕಟೀಲ್‌ ಅವರು ಹೊಸ ಬಾಂಬ್‌ ಎಸೆದಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ನಳಿನಕುಮಾರ ಕಟೀಲ್‌(Nalin Kumar Kateel), ಸದ್ಯ ನಮಗೆ ಅವರ ಅವಶ್ಯಕತೆ ಇಲ್ಲ ಎಂದು ಸುಮ್ಮನಿದ್ದೇವೆ. ಕಾಂಗ್ರೆಸ್‌ ಶಾಸಕರು ನಮ್ಮ ಪಕ್ಷಕ್ಕೆ ಬರಲು ಅವರೇ ನಮಗೆ ಕೇಳುತ್ತಿದ್ದಾರೆ. ಕಾಂಗ್ರೆಸ್ಸಿನಲ್ಲಿ ಅಸಮಾಧಾನವಿದ್ದಂತೆ ಕಾಣುತ್ತಿದೆ. ಮುಂದೆ ಚುನಾವಣೆಯಲ್ಲಿಯೂ ಅವರನ್ನು ತೆಗೆದುಕೊಳ್ಳುವ ಅವಶ್ಯಕತೆಯೂ ಇಲ್ಲ ಎಂದರು.

Election Commission: ರಾಜ್ಯದಲ್ಲಿ ಮತ್ತೊಂದು ಎಲೆಕ್ಷನ್ ಗೆ 'ದಿನಾಂಕ ಘೋಷಣೆ'..!

ಬರಲಿರುವ ನಾಲ್ಕು ಉಪ ಚುನಾವಣೆಯಲ್ಲಿ (ಮೂರು ವಿಧಾನಸಭೆ ಹಾಗೂ ಒಂದು ಲೋಕಸಭೆ ಉಪ ಚುನಾವಣೆ) ಬಿಜೆಪಿ(BJP) ಗೆಲುವು ನಿಶ್ಚಿತ ಎಂದ ಅವರು, ಸಿಂದಗಿ ವಿಧಾನಸಭೆ ಉಪ ಚುನಾವಣೆ ಅಭ್ಯರ್ಥಿ ಕುರಿತು ಪಕ್ಷ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಚರ್ಚೆ ನಡೆಸಿ ಯಾರು ಗೆಲ್ಲುವ ಅಭ್ಯರ್ಥಿ ಎಂಬುವುದನ್ನು ಅರಿತು ಅಂಥವರಿಗೆ ಟಿಕೆಟ್‌ ನೀಡಲಾಗುವುದು ಎಂದು ಹೇಳಿದರು.

Sharath Bachegowda: ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಫೆ. 26ಕ್ಕೆ 'ಕಾಂಗ್ರೆಸ್'ಗೆ ಸೇರ್ಪಡೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News