ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಪ್ರಕರಣ ರಾಜ್ಯದಲ್ಲಿ ಸಂಚನ ಮೂಡಿಸಿದೆ. ಇದನ್ನು ಕೆಲವರು ಫೇಕ್ ಅಂತಿದ್ರೆ, ಇನ್ನೂ ಕೆಲವರು ಇದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ.


COMMERCIAL BREAK
SCROLL TO CONTINUE READING

, , Sex Scandal, Congress, BJP,


ಅದರಲ್ಲೂ ಗೋಕಾಕ್ ಕ್ಷೇತ್ರದ ರಮೇಶ್ ಜಾರಕಿಹೊಳಿ(Ramesh Jarkiholi) ಬೆಂಬಲಿಗರು ಈ ವಿಡಿಯೋ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದಾರೆ ಎನ್ನುವ ಗಂಭೀರ ಆರೋಪ ಮಾಡುತ್ತಿದ್ದಾರೆ.


Bus Ticket: ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್: BMTC ಟಿಕೆಟ್ ದರ ಏರಿಕೆ!


ಇನ್ನು ಈ ಬಗ್ಗೆ ಸ್ವತಃ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಅವರು ಇಂದು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದು, ಸಿಡಿ ಬಹಿರಂಗ ವಿಚಾರದಲ್ಲಿ ನಾನು ಏನೂ ಮಾತನಾಡುವುದಿಲ್ಲ ಎಂದರು. ಸಿಡಿ ವಿಚಾರದಲ್ಲಿ ನನ್ನ ಹೆಸರನ್ನು ಏಕೆ ಎಳೆದು ತರುತ್ತಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ರಾಜಕಾರಣಿಗಳು ಮತ್ತೊಬ್ಬರಿಗೆ ಮಾದರಿಯಾಗುವಂತೆ ಇರಬೇಕು. ತನಿಖೆಯ ನಂತರ ಸತ್ಯಾಂಶ ಗೊತ್ತಾಗುತ್ತದೆ. ನಾನು ಆ ವಿಚಾರದಲ್ಲಿ ಏನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.


BS Yediyurappa: 'ಬಿಎಸ್ ವೈ, ರಾಘವೇಂದ್ರ, ಈಶ್ವರಪ್ಪರ ಎಲ್ಲಾ ಹಗರಣ ಬಯಲು ಮಾಡ್ತೇನೆ'


ಗೋಕಾಕ್ ನಲ್ಲಿ ನಡೆದ ಪ್ರತಿಭಟನೆ(Protest)ಯಲ್ಲಿ ತಮ್ಮ ಹೆಸರನ್ನು ಪ್ರಸ್ತಾಪಿಸಿರುವುದಕ್ಕೆ ಅದು ಏಕೆ ಪ್ರಸ್ತಾಪಿಸಿದ್ದಾರೆ ಎನ್ನುವುದು ನನಗೆ ತಿಳಿದಿಲ್ಲ. ಅದರ ಬಗ್ಗೆ ಏನೂ ಮಾತಾಡಲ್ಲ. ಬೇರೆ ಏನಾದರೂ ಕೇಳಿ ಎಂದು ಹೇಳಿದರು.


CP Yogeshwar: CD ಪ್ರಕರಣ ಕುರಿತಂತೆ 'ಹೊಸ ಬಾಂಬ್' ಸಿಡಿಸಿದ ಸಚಿವ ಯೋಗೇಶ್ವರ್!


ಮೊದಲಿನಿಂದಲೂ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ಅವರು ರಾಜಕೀಯ ಬದ್ಧ ವೈರಿಗಳು. ಮಾಧ್ಯಮ(Media)ಗಳ ಮುಂದೆ ಆರೋಪ-ಪ್ರತ್ಯಾರೋಪಗಳನ್ನು ಮಾಡಿಕೊಂಡು ಬಂದವರು.


Shivaram Hebbar: 'ನಮ್ಮ ಸೇಫ್ಟಿಗೋಸ್ಕರ, ನಿಮ್ಮ ಭಯಕ್ಕಾಗಿ ಕೋರ್ಟ್ ಗೆ ಹೋಗುವಂತಾಯ್ತು'


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.