VIDEO: ಶಾಸಕ ತನ್ವೀರ್ ಸೇಠ್ ಹತ್ಯೆಗೆ ಯತ್ನ, ಆರೋಪಿ ಬಂಧನ
ಮೈಸೂರಿನ ಬನ್ನಿಮಂಟಪ ಆವರಣದಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಸಂಬಂಧಿಕರೊಬ್ಬರ ಬೀಗರ ಔತಣಕೂಟದಲ್ಲಿ ಶಾಸಕ ತನ್ವೀರ್ ಸೇಠ್ ಪಾಲ್ಗೊಂಡಿದ್ದ ವೇಳೆ ಈ ಹಲ್ಲೆ ನಡೆದಿದೆ.
ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಭಾನುವಾರ ರಾತ್ರಿ (ನವೆಂಬರ್ 17) ಮಾರಣಾಂತಿಕ ದಾಳಿ ನಡೆಸಲಾಗಿದೆ. ಆರೋಪಿ ಫರಾನ್ ಪಾಷಾ ತೀಕ್ಷ್ಣವಾದ ಆಯುಧದಿಂದ ತನ್ವೀರ್ ಸೇಠ್ ಅವರ ಕುತ್ತಿಗೆ ಭಾಗಕ್ಕೆ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ತನ್ವೀರ್ ಸೇಠ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ತನ್ವೀರ್ ಸೇಠ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಮೈಸೂರಿನ ಬನ್ನಿಮಂಟಪ ಆವರಣದಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಸಂಬಂಧಿಕರೊಬ್ಬರ ಬೀಗರ ಔತಣಕೂಟದಲ್ಲಿ ಶಾಸಕ ತನ್ವೀರ್ ಸೇಠ್ ಪಾಲ್ಗೊಂಡಿದ್ದ ವೇಳೆ ಈ ಹಲ್ಲೆ ನಡೆದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉದ್ಯೋಗ ಕೊಡಿಸಲು ಸಹಾಯ ಮಾಡಲಿಲ್ಲ ಎಂಬ ಕಾರಣಕ್ಕೆ ಮೈಸೂರಿನ ನರಸಿಂಹರಾಜ ಠಾಣೆ ಪೊಲೀಸರು ಗೌಸಿಯಾನಗರದ ಮುಕ್ಬುಲ್ ಎಂಬುವರ ಪುತ್ರ ಫರಾನ್ ಪಾಷಾ ತನ್ವೀರ್ ಸೇಠ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ ಎನ್ನಲಾಗಿದೆ.
ಫರಾನ್ ಎಸ್ಡಿಪಿಐ ಸಂಘಟನೆ ಪರ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಕಳೆದ 8 ವರ್ಷಗಳಿಂದ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದನು. ಕಳೆದ ಎರಡೂ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಆತ ತನ್ವೀರ್ ಸೇಠ್ ಪರ ಕೆಲಸ ಮಾಡಿದ್ದರು ಎಂದು ಮಾಹಿತಿ ಲಭಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.