ಕಾಂಗ್ರೆಸ್ ಅತೃಪ್ತ ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ: ಸಿಎಂ
ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸರ್ಕಾರ ಸುಗಮವಾಗಿ ಸಾಗಲಿದೆ. ಯಾವುದೇ ಸಮಸ್ಯೆಯಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು: ಮುಂಬೈನ ಹೋಟೆಲ್'ನಲ್ಲಿ ತಂಗಿರುವ ಕಾಂಗ್ರೆಸ್ ಅತೃಪ್ತ ಶಾಸಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಸರ್ಕಾರ ಅಸ್ಥಿರತೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಮಾಧ್ಯಗಳ ಸಂಪರ್ಕಕ್ಕೆ ಸಿಗದೇ ಇರಬಹುದು. ಆದರೆ ನನ್ನ ಸಂಪರ್ಕಕ್ಕಲ್ಲ. ನಾನು ಅವರೊಂದಿಗೆ ಪ್ರತಿನಿತ್ಯ ಸಂಪರ್ಕದಲ್ಲಿದ್ದೇನೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸರ್ಕಾರ ಸುಗಮವಾಗಿ ಸಾಗಲಿದೆ. ಯಾವುದೇ ಸಮಸ್ಯೆಯಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಪಕ್ಷೇತರ ಶಾಸಕರು ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದ ಬೆನ್ನಲ್ಲೇ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ. ಆಪರೇಶನ್ ಕಮಲ ಯಶಸ್ವಿಯಾಗಲಿದೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಿದ ಸಿಎಂ, ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ಮುಂಬೈನಲ್ಲಿ ತಂಗಿರುವ ಎಲ್ಲಾ ಕಾಂಗ್ರೆಸ್ ಶಾಸಕರೂ ರಾಜ್ಯಕ್ಕೆ ಹಿಂತಿರುಗಲಿದ್ದಾರೆ ಎಂದು ಹೇಳಿದ್ದಾರೆ.