ಬೆಂಗಳೂರು: ಏಪ್ರಿಲ್ 9ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಅಲ್ಲಿ ಟಿಕೆಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಏಪ್ರಿಲ್ 17ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿ.ಬಿ. ಜಯಚಂದ್ರ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 4(ಬುಧವಾರ) ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಗೂಳೂರು, ನಾಗವಲ್ಲಿ, ಹೆಬ್ಬೂರು, ಕುಣಿಗಲ್ ಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿಸಿದರಲ್ಲದೆ,  ಏಪ್ರಿಲ್ 9ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಅಲ್ಲಿ ಟಿಕೆಟ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಏಪ್ರಿಲ್ 17ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.


ಮುಂದುವರೆದು ಮಾತನಾಡಿದ ಅವರು ಪಕ್ಷದಲ್ಲಿ ಎಲ್ಲಾ ನಾಯಕರ ಮಕ್ಕಳಿಗೂ ಟಿಕೇಟ್ ನೀಡುತ್ತಿಲ್ಲ. ಕೆಲವರ ಮಕ್ಕಳಿಗೆ ಮಾತ್ರ ಟಿಕೆಟ್ ನೀಡಲಾಗುತ್ತಿದೆ. ಚಿಕ್ಕನಾಯಕನ ಹಳ್ಳಿ ನನ್ನ ಹುಟ್ಟೂರು. ಅಲ್ಲಿ ನನ್ನ ಮಗನಿಗೆ ಟಿಕೇಟ್ ನೀಡುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಟಿಕೆಟ್ ಗಾಗಿ ನಾನು ಲಾಬಿ ಮಾಡುವುದಿಲ್ಲ ಎಂದರು.