ಡಿಕೆಶಿ ಭೇಟಿಯಾಗಿ ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

ಡಿ.ಕೆ. ಶಿವಕುಮಾರ್ ಅವರು ತಂಗಿರುವ ಸಂಸದ ಹಾಗೂ ಅವರ ಸಹೋದರ ಡಿ.ಕೆ‌. ಸುರೇಶ್ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ.  

Last Updated : Oct 25, 2019, 10:03 AM IST
ಡಿಕೆಶಿ ಭೇಟಿಯಾಗಿ ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ title=

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದು ತಿಹಾರ್ ಜೈಲಿನಿಂದ ಬುಧವಾರವಷ್ಟೇ ಹೊರಬಂದಿರುವ ಮಾಜಿ ಸಚ್ವಿಯ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದರು.

ನವದೆಹಲಿಯಲ್ಲಿಂದು ಡಿ.ಕೆ. ಶಿವಕುಮಾರ್ ಅವರು ತಂಗಿರುವ ಸಂಸದ ಹಾಗೂ ಅವರ ಸಹೋದರ ಡಿ.ಕೆ‌. ಸುರೇಶ್ ಅವರ ನಿವಾಸಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಡಿಕೆಶಿ ಅವರ ಸಹೋದರ ಡಿ.ಕೆ. ಸುರೇಶ್ ಕೂಡ ಜೊತೆಯಲ್ಲಿದ್ದರು.

ಪಿಎಂಎಲ್ ಅಡಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿ 48 ದಿನಗಳ ಕಾಲ ತಿಹಾರ್ ಕೇಂದ್ರ ಕಾರಾಗೃಹದಲ್ಲಿದ್ದ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

ಡಿಕೆಶಿಗೆ ಜಾಮೀನು ಸಿಕ್ಕಿದ್ದು ಈ ಮೂರು ಅಂಶಗಳಿಂದಾಗಿ...!

Trending News