ಬೆಂಗಳೂರು: 75ನೇ ವರ್ಷದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ವೇಳೆ ಬಿಜೆಪಿ ತಿರಂಗಾಕ್ಕೆ ಹತ್ತು ಹಲವು ಬಗೆಯಲ್ಲಿ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ನಕಲಿ ದೇಶಭಕ್ತರ ಅಸಲಿ ದೇಶದ್ರೋಹದ ಕೆಲಸವೆಂದು ವಿಡಿಯೋ ಹಂಚಿಕೊಂಡಿರುವ ಕಾಂಗ್ರೆಸ್ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದೆ. ರಾಷ್ಟ್ರಧ್ವಜ ಬದಲಿಸುವ ಮೊದಲು ಎಸೆಯುವ ಕೆಲಸವೇ ಈಶ್ವರಪ್ಪನವರೇ? ಎಂದು ಕುಟುಕಿದೆ.


COMMERCIAL BREAK
SCROLL TO CONTINUE READING

ರಾಷ್ಟ್ರಧ್ವಜ ಬದಲಿಸುತ್ತೇವೆ ಎಂದಿದ್ದ ಬಿಜೆಪಿ ತಿರಂಗಾಕ್ಕೆ ಹತ್ತು ಹಲವು ಬಗೆಯಲ್ಲಿ ಅವಮಾನ ಮಾಡುತ್ತಿದೆ. ರಾಷ್ಟ್ರಧ್ವಜವನ್ನು ಹೀನಾಯವಾಗಿ ಎಸೆಯುವ ಬಿಜೆಪಿ ತಮ್ಮನ್ನು ತಾವು ರಾಷ್ಟ್ರವಾದಿಗಳು ಎಂದು ಕರೆದುಕೊಳ್ಳುವಂತಹ ವ್ಯಂಗ್ಯ ಬೇರಿಲ್ಲ! ಬಿಜೆಪಿ ರಾಷ್ಟ್ರಕ್ಕೆ ತಗುಲಿದ ವ್ಯಾದಿಗಳೇ ಹೊರತು ರಾಷ್ಟ್ರವಾದಿಗಳಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.


ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ದುಷ್ಟ ಶಕ್ತಿಗಳ ಮಟ್ಟ ಹಾಕಲಾಗಿದೆ ಎಂದ ಬಿಜೆಪಿ


‘ದೇಶದ್ರೋಹಿ RSS ತತ್ವ ಸಿದ್ಧಾಂತದಂತೆ ಕೆಲಸ ಮಾಡುತ್ತೇನೆ ಎಂದಿದ್ದಾರೆ ಸಿಎಂ. ಬಸವರಾಜ್ ಬೊಮ್ಮಾಯಿಯವರೇ ತಾವು ಸಂವಿಧಾನದ ಆಶಯಗಳ ಮೇಲೆ ಆಡಳಿತ ನಡೆಸಬೇಕಿತ್ತು. ಡಾ.ಬಿ.ಆರ್.ಅಂಬೇಡ್ಕರ್ ತತ್ವಗಳಲ್ಲಿ ಕೆಲಸ ಮಾಡಬೇಕಿತ್ತು. ಪ್ರಜಾಪ್ರಭುತ್ವದ ಅದರ್ಶದಲ್ಲಿ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವ ವಿರೋಧಿಗಳೇ ನಿಮಗೆ ಆದರ್ಶ ಎನ್ನುವುದು ರಾಜ್ಯದ ದೌರ್ಭಾಗ್ಯ’ವೆಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.


ಕೋಮು ಕಲಹಕ್ಕೆ ನೀಡುತ್ತಿರುವ ಉದ್ದೇಶಪೂರ್ವಕ ಕುಮ್ಮಕ್ಕೊ? ಬಿಜೆಪಿ ಶಿವಮೊಗ್ಗದಲ್ಲಿ ಕೋಮು ರಾಜಕೀಯದ ಪ್ರಯೋಗಶಾಲೆಯ ಬ್ರಾಂಚ್ ತೆರೆದಿರುವಂತಿದೆ’ ಎಂದು ಕಾಂಗ್ರೆಸ್ ಆರೋಪಿಸಿದೆ.


ಸಾಕ್ಷ್ಯಾಧಾರ ಇದ್ದರೆ PFI, SDPI ಸಂಘಟನೆಗಳನ್ನು ನಿಷೇಧಿಸಲಿ: ಸಿದ್ದರಾಮಯ್ಯ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.